30.5 C
Mumbai
June 8, 2026
Mumbai News Kannada
ಮುಂಬಯಿ

ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜ್ ಐರೋಲಿ: ವಿದ್ಯಾರ್ಥಿಗಳಿಗೆ  ಲೀಡರ್ಶಿಪ್ ಬಗ್ಗೆ ಉಪನ್ಯಾಸ. 





   ಮುಂಬಯಿ ಜುಂ 21.    ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜ್ ಐರೋಲಿ ಯಲ್ಲಿ ವಿದ್ಯಾರ್ಥಿಗಳಿಗೆ Pathway to Leadership Excellence ಎಂಬ ವಿಷಯದ ಮೇಲೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.  ಖ್ಯಾತ ಉಪನ್ಯಾಸಕ ಡಾ. ಸುನಿಲ್ ರಾಜ್ ವಿದ್ಯಾರ್ಥಿಗಳಿಗೆ ಲೀಡರ್ಶಿಪ್ ಗೆ ಬೇಕಾದ ಗುಣಗಳ ಬಗ್ಗೆ ತಿಳಿ ಹೇಳಿದರು. ಹಲವಾರು ಮ್ಯಾನೇಜ್ಮೆಂಟ್ ಗುರುಗಳನ್ನು ಹೆಸರಿಸುತ್ತಾ ಅವರು ಮ್ಯಾನೇಜ್ಮೆಂಟ್ ಬಗ್ಗೆ ಕೊಟ್ಟ  ವ್ಯಾಖ್ಯಾನವನ್ನು ವಿವರಿಸಿದರು.

     ಒಳ್ಳೆಯ ಹಾಗು ಸಫಲ ನಾಯಕನಾಗುವ ಸಲುವಾಗಿ ಅಪಾರ ಪರಿಶ್ರಮ ಪಡಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಿದರು. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಸಾಧನೆಯನ್ನು ಮೇಲಕುಹಾಕುತ್ತಾ ವಿದ್ಯಾರ್ಥಿಗಳು ಪರಿಶ್ರಮದಿಂದ ಯಶಸ್ಸನ್ನು ಪಡೆಯಬೇಕೆಂದು ತಿಳಿಸಿದರು. ನಾವು ತೆಗೆದುಕೊಳ್ಳುವ ತೀರ್ಮಾನ, ಮುಂದಾಲೋಚನೆ, ಪರೋಪಕಾರ, ಸತತ ಪರಿಶ್ರಮ ದಿಂದ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕೆಂದು ಸುನಿಲ್ ರಾಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮ  ಸರಸ್ವತಿ ಪೂಜೆ ಹಾಗು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. IQAC ಸಂಚಾಲಕಿ  ಸಿಂಧು ರಮಣಿ ಅತಿಥಿಗಳನ್ನು,ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು, ಪ್ರಾಧ್ಯಾಪಕ ವೃಂದ ಹಾಗು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.  ಮುಖ್ಯ ಅತಿಥಿ ಸುನಿಲ್ ರಾಜ್ ರನ್ನು ಜ್ಞಾನ ವಿಕಾಸ ಮಂಡಲದ ಕಾರ್ಯಾಧ್ಯಕ್ಷ  ಕೆ. ಎಚ್. ದೇಶಪಾಂಡೆ ಅವರು ಹೂಗುಚ್, ಶಾಲು ಹಾಗು ನೆನಪಿನ ಕಾಣಿಕೆ ಸಲ್ಲಿಸಿ ಸನ್ಮಾನಿಸಿದರು. ಮುಂಬೈ ಠಾಣೆ ಸ್ಟೂಡೆಂಟ್ಸ್ ವೆಂಚುವರ್ ಸಂಸ್ಥೆಯ ಪ್ರಮುಖ  ಪ್ರಿನ್ಸ್ ಜೋಶೆಫ, ಡಾ.ವಂದನಾ,  ಅನಿತಾ ಪ್ರಿನ್ಸ್ ಅವರನ್ನು ಹೂಗುಚ್ಛ ಸಲ್ಲಿಸಿ ಸ್ವಾಗತಿಸಲಾಯಿತು. ಪ್ರಾಚಾರ್ಯ ಡಾ. ಬಿ ಆರ್.ದೇಶಪಾಂಡೆ ಇವರು  ಕಾರ್ಯಾಧ್ಯಕ್ಷ  ಕೆ. ಎಚ್.ದೇಶಪಾಂಡೆ ಹಾಗು ಜೊತೆ ಪ್ರದಾನ ಕಾರ್ಯದರ್ಶಿ  ಜಾನ್ ಥಾಮಸ್ ಅವರನ್ನು ಹೂಗುಚ್ಛ ಸಲ್ಲಿಸಿ ಸ್ವಾಗತಿಸಿದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ  ಕೆ ಎಚ್ಚ.ದೇಶಪಾಂಡೆ ಅವರು  ವಿದ್ಯಾರ್ಥಿಗಳು ನಾಯಕನಾಗಲು ಬೇಕಾದ ವ್ಯಕ್ತಿತ್ವವನ್ನು ಪಡೆಯಬೇಕೆಂದು ತಿಳಿಸಿದರು. ಒಳ್ಳೆಯ ಶಿಕ್ಷಣ ಪಡೆದು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರಬೇಕೆಂದು ತಿಳಿಸಿದರು.   ಜ್ಞಾನ ವಿಕಾಸ ಮಂಡಲದ ಆಡಳಿತ ಮಂಡಳಿಯ ಸದಸ್ಯ ಶ್ರೀ ಸತೀಶ ಕಿಲಾರಿ ಅವರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಸಾಗರ  ಶಿಂದೆ ವಂದನಾರ್ಪಣೆ ಸಲ್ಲಿಸಿದರು.



Related posts

ಮುಂಬೈ ಕುಲಾಲ ಸಂಘ ಮುಂಬೈ ಇದರ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಮಾತಾ ವೈಷ್ಣೋದೇವಿ ದರ್ಶನ: ಭಕ್ತಿ-ಒಗ್ಗಟ್ಟಿನ ಸಮಾಗಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಆಡಳಿತ ಸಮಿತಿಯ ಚುನಾವಣೆ – ಜಯಶಾಲಿಯಾದ “ವಿಶನ್-2030” ಪ್ಯಾನೇಲ್

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರಡಿ ಸೇವಾ ಟ್ರಷ್ಟ್, ಮುಂಬಯಿ; ಎ. 5 ರಂದು ಸಮಾಲೋಚನಾ ಸಭೆ ಹಾಗೂ ಮನವಿ ಪತ್ರ ಬಿಡುಗಡೆ

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರಂಭದ ಉದ್ಘಾಟನೆ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್; ಭಕ್ತಿ ಸಡಗರದಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ.

Mumbai News Desk

ದಾಸ ಸಾಹಿತ್ಯಕ್ಕೆ ಹರಿದಾಸರ ಕೊಡುಗೆ ಅನನ್ಯ: ಮಧುಸೂದನ್‌ ಟಿ.ಆರ್‌.

Mumbai News Desk