July 23, 2026
Mumbai News Kannada
ಮುಂಬಯಿ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ







ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಸಹಕಾರದೊಂದಿಗೆ ಧಾರ್ಮಿಕ ಸಮಿತಿಯ ಸಂಯೋಜನೆಯಲ್ಲಿ ಜುಲೈ 21 ರಂದು ರವಿವಾರ ಅಪರಾಹ್ನ 3-00 ರಿಂದ ಥಾಣೆ ಪಶ್ಚಿಮದಲ್ಲಿರುವ ಸಂಘದ ನೂತನ ಕಿರು ಸಭಾಂಗಣದಲ್ಲಿ (ಪ್ರಥಮ ಮಹಡಿ, 9 ಮಾನಸಿ) ಗುರುಪೂರ್ಣಿಮೆ ಆಚರಿಸಲಾಯಿತು
ಅಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದ ಬಳಿಕ ಬ್ರಹ್ಮಶ್ರೀ ನಾರಾಯಣಗುರು ಭಜನಾ ಮಂಡಳಿ ಮತ್ತು ಸದಸ್ಯರಿಂದ ಭಜನೆ ನಡೆಯಿತು ತದನಂತರ ಧಾರ್ಮಿಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಪ್ರಧಾನ ಅರ್ಚಕರಾದ ಶ್ರೀಧರ ವಿ. ಪೂಜಾರಿ ಮಹಾಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದ ವಿತರಿಸಿದರು. ಮಾಜಿ ಉಪಾಧ್ಯಕ್ಷರಾದ ಸಿ. ಎ. ಪೂಜಾರಿ ಗುರು ಸೋತ್ರ ಪಠಿಸಿ ಪ್ರಾರ್ಥನೆ ಸಲ್ಲಿಸಿದರು.
ಈ ಗುರು ಪೂರ್ಣಿಮೆ ಉತ್ಸವದಲ್ಲಿ ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ಉಪಾಧ್ಯಕ್ಷರುಗಳಾದ ಎನ್. ಎಮ್. ಬಿಲ್ಲವ, ಆನಂದ ಕೆ. ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಎನ್. ಜಿ. ಪೂಜಾರಿ, ಜೊತೆ ಕಾರ್ಯದರ್ಶಿ ಹರೀಶ್ ಎನ್. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಧಾರ್ಮಿಕ ಸಮಿತಿಯ ಜೊತೆ ಕಾರ್ಯದರ್ಶಿ ಸೋಮಯ್ಯ ಪೂಜಾರಿ ಹಾಗೂ ಆಡಳಿತ ಮಂಡಳಿ ಮತ್ತು ಉಪಸಮಿತಿಗಳ ಸದಸ್ಯರು, ಸಮಾಜ ಬಾಂಧವರು ಸಂಘದ ಸದಸ್ಯರು ಮತ್ತು ಹಿತಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಬ್ರಹ್ಮಶ್ರೀ ನಾರಾಯಣ ಗುರುವರ್ಯರಗೆ ಗುರುವಂದನೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು.



Related posts

ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ನೂತನ ಅಧ್ಯಕ್ಷರಾಗಿ ರವಿ ಎಂ ಸುವರ್ಣ ಆಯ್ಕೆ

Mumbai News Desk

ಡೊಂಬಿವಲಿಯಲ್ಲಿ ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ ಸಂಭ್ರಮ: ಸಾಹಿತಿಗಳಾದ ಪ್ರಜ್ಞಾ ಮತ್ತಿಹಳ್ಳಿ ಹಾಗೂ ತೇಜಾವತಿ ಎಚ್.ಡಿ ಅವರಿಗೆ ಪ್ರತಿಷ್ಠಿತ ಸ್ಮಾರಕ ಪ್ರಶಸ್ತಿ ಪ್ರದಾನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಕ್ಷ್ ಜೆ.ಶೆಟ್ಟಿಗೆ ಶೇ.94.20 ಅಂಕ

Mumbai News Desk

ಕಲೆಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥ -ವಾರ್ಷಿಕ ಅಯ್ಯಪ್ಪ ಮಹಾಪೂಜೆ ಭಕ್ತಿ, ಸಂಭ್ರಮದೊಂದಿಗೆ ಸಂಪನ್ನ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನೀಲ್ ರಾಜೇಶ್ ಶೆಟ್ಟಿ ಶೇ 91.20 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಕಚೇರಿಯ ವತಿಯಿಂದ ವಿಹಾರ ಕೂಟ

Mumbai News Desk