30.5 C
Mumbai
June 8, 2026
Mumbai News Kannada
ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.





ಮುಂಬಯಿ,ಜು.21: ತುಳುನಾಡ ಸೇವಾ ಸಮಾಜ,ಮೀರಾ ಭಾಯಂದರ್ ಇದರ ಅದ್ಯಕ್ಷ, ಅಖಿಲ ಭಾರತ ತುಳು ಒಕ್ಕೂಟದ ಕಾರ್ಯಕಾರಿ ಸಮಿತಿಯ ಸದಸ್ಯ, ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ , ಮೀರಾ ರೋಡ್ ಶನೀಶ್ವರ ಸೇವಾ ಸಮಿತಿಯ ಸಲಹೆಗಾರ, ಸಮಾಜ ಸೇವಕ ಡಾ.ರವಿರಾಜ್ ಸುವರ್ಣ ಮೀರಾ ರೋಡ್ ಇವರನ್ನು ಇತ್ತೀಚೆಗೆ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಅಕಾಡೆಮಿಯ ನಿಯಮಾವಳಿಗಳ ಪ್ರಕಾರ ಸರ್ಕಾರದ ನಿರ್ದೇಶನದಂತೆ ಸಹ ಸದಸ್ಯರನ್ನಾಗಿ ನಿರ್ದೇಶನ ಮಾಡಲಾಗಿದೆ.
ತುಳು ಭಾಷೆ ಹಾಗೂ ಸಂಸ್ಕೃತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಇವರು2010ರಲ್ಲಿ ಕೇರಳ ತುಳು ಅಕಾಡೆಮಿ ಹಾಗೂ 2016ರಲ್ಲಿ ಕೊಡಗು ಸಾಹಿತ್ಯ ಅಕಾಡೆಮಿಯೊಂದಿಗೆ ಮೀರಾ-ಭಾಯಂದರಿನಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ಹಮ್ಮಿಕೊಂಡ ಕೀರ್ತಿ ಇವರಿಗಿದೆ.
ತುಳು ಸಮ್ಮೇಳನದಲ್ಲಿ ದೇಶ-ವಿದೇಶಗಳಲ್ಲಿ ಭಾಗವಹಿಸಿದ ಇವರು ತುಳು ಭಾಷೆ ಹಾಗೂ ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸದಾ ಶ್ರಮಿಸುತ್ತಿದ್ದಾರೆ.
ಇವರ ನೇಮಕಾತಿಗೆ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡು , ಕರ್ನಾಟಕ ಸರ್ಕಾರದ ಶಾಸಕ ಹಾಗೂ ಸಭಾಪತಿ ಯು.ಟಿ.ಖಾದರ್ ಹಾಗೂ ಅಖಿಲ ಭಾರತ ಕಿಸಾನ್ ಕಾಂಗ್ರೆಸ್ಸಿನ ಸಂಯುಕ್ತ ಸಂಯೋಜಕರಾದ ಸುರೇಶ್ ಶೆಟ್ಟಿ ಯೆಯ್ಯಾಡಿಯವರು ಶಿಫಾರಸು ಮಾಡಿದ್ದರು.



Related posts

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಅರಬ್ಬಿ ಸಮುದ್ರದ ಅಲೆಗಳನ್ನು ಗೆದ್ದ ಮುಂಬೈ ಹುಡುಗಿ: 5 ಕಿ.ಮೀ ಈಜಿ ದಾಖಲೆ ಬರೆದ ದಿಶಿತಾ ಚಂದ್ರಶೇಖರ್ ಪೂಜಾರಿ

Mumbai News Desk

ಮುಂಬೈ ರೈಲು ಪ್ರಯಾಣಿಕರ ಗಮನಕ್ಕೆ: ಮೇ 19ರವರೆಗೆ ಸಿಎಸ್‌ಎಂಟಿ ರೈಲು ಸಂಚಾರ ಸ್ಥಗಿತ; ಮಂಗಳೂರು ಸೂಪರ್‌ಫಾಸ್ಟ್ ಪ್ರಯಾಣ ಥಾಣೆಯಲ್ಲೇ ಅಂತ್ಯ

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk