30 C
Mumbai
April 24, 2026
Mumbai News Kannada
ಸುದ್ದಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.





ಮುಂಬಯಿ,ಜು.21: ತುಳುನಾಡ ಸೇವಾ ಸಮಾಜ,ಮೀರಾ ಭಾಯಂದರ್ ಇದರ ಅದ್ಯಕ್ಷ, ಅಖಿಲ ಭಾರತ ತುಳು ಒಕ್ಕೂಟದ ಕಾರ್ಯಕಾರಿ ಸಮಿತಿಯ ಸದಸ್ಯ, ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯ , ಮೀರಾ ರೋಡ್ ಶನೀಶ್ವರ ಸೇವಾ ಸಮಿತಿಯ ಸಲಹೆಗಾರ, ಸಮಾಜ ಸೇವಕ ಡಾ.ರವಿರಾಜ್ ಸುವರ್ಣ ಮೀರಾ ರೋಡ್ ಇವರನ್ನು ಇತ್ತೀಚೆಗೆ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಅಕಾಡೆಮಿಯ ನಿಯಮಾವಳಿಗಳ ಪ್ರಕಾರ ಸರ್ಕಾರದ ನಿರ್ದೇಶನದಂತೆ ಸಹ ಸದಸ್ಯರನ್ನಾಗಿ ನಿರ್ದೇಶನ ಮಾಡಲಾಗಿದೆ.
ತುಳು ಭಾಷೆ ಹಾಗೂ ಸಂಸ್ಕೃತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಇವರು2010ರಲ್ಲಿ ಕೇರಳ ತುಳು ಅಕಾಡೆಮಿ ಹಾಗೂ 2016ರಲ್ಲಿ ಕೊಡಗು ಸಾಹಿತ್ಯ ಅಕಾಡೆಮಿಯೊಂದಿಗೆ ಮೀರಾ-ಭಾಯಂದರಿನಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ಹಮ್ಮಿಕೊಂಡ ಕೀರ್ತಿ ಇವರಿಗಿದೆ.
ತುಳು ಸಮ್ಮೇಳನದಲ್ಲಿ ದೇಶ-ವಿದೇಶಗಳಲ್ಲಿ ಭಾಗವಹಿಸಿದ ಇವರು ತುಳು ಭಾಷೆ ಹಾಗೂ ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸದಾ ಶ್ರಮಿಸುತ್ತಿದ್ದಾರೆ.
ಇವರ ನೇಮಕಾತಿಗೆ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡು , ಕರ್ನಾಟಕ ಸರ್ಕಾರದ ಶಾಸಕ ಹಾಗೂ ಸಭಾಪತಿ ಯು.ಟಿ.ಖಾದರ್ ಹಾಗೂ ಅಖಿಲ ಭಾರತ ಕಿಸಾನ್ ಕಾಂಗ್ರೆಸ್ಸಿನ ಸಂಯುಕ್ತ ಸಂಯೋಜಕರಾದ ಸುರೇಶ್ ಶೆಟ್ಟಿ ಯೆಯ್ಯಾಡಿಯವರು ಶಿಫಾರಸು ಮಾಡಿದ್ದರು.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk