32 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.





ಉಡುಪಿ,ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 21ರಂದು, ಗುರು ಭಕ್ತರ, ಉಪಸ್ಥಿತಿಯಲ್ಲಿ ಭಕ್ತಿ, ಶ್ರದ್ದೆಯಿಂದ,ವಿಜೃಂಭಣೆಯಿಂದ ಜರಗಿತು.
ಅಂದು ಬೆಳ್ಳಿಗೆ 5 ಗಂಟೆಗೆ ಕಾಕಡ ಆರತಿ ಬೆಳಗಳಾಯಿತು.
ನಂತರ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ ನಡೆಯಿತು.
ಮಧ್ಯಾಹ್ನ 12 ಗಂಟೆಗೆ ಶ್ರೀ ನಿತ್ಯಾನಂದ ಸ್ವಾಮಿಗೆ ಮಹಾಪೂಜೆ ನಡೆಯಿತು. ಮಹಾಪೂಜೆಯ ಬಳಿಕ ಬಾಲಾಭೋಜನ ಮತ್ತು ಅನ್ನಸಂತರ್ಪಣೆ ಆರಂಭವಾಯಿತು.


ತಡ ಸಂಜೆ ಪಲ್ಲಕ್ಕಿ ಉತ್ಸವ, ಮಹಾಪೂಜೆಯಾಗಿ ಸೇರಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಗುರು ಪೂರ್ಣಿಮಾ ಮಹೋತ್ಸವದಲ್ಲಿ ಮಂದಿರದ ಆಡಳಿತ ಟ್ರಸ್ಟಿ, ಮುಂಬಯಿಯ ಉದ್ಯಮಿ ಕೆ. ಕೆ ಆವರ್ಸೆಕರ್, ಮಂದಿರ ಮಠದ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ದಿವಾಕರ ಶೆಟ್ಟಿ ತೋಟದಮನೆ, ಕಾರ್ಯದರ್ಶಿ ತೋನ್ಸೆ ನವೀನ್ ಶೆಟ್ಟಿ, ಜಾಯಿಂಟ್ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ಮೋಹನ ಚಂದ್ರ ನಂಬಿಯಾರ್, ಕಾಂಞಂಗಾಡ್‌ ನ ಟ್ರಸ್ಟಿ ಕುಮಾರ್ ಎನ್ ಬಂಗೇರ, ಕೋಶಾಧಿಕಾರಿ ನರಸಿಂಹ ಶೆಣೈ, ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ, ರಮೇಶ್ ಶೆಟ್ಟಿ ಪಾಲ್ಗರ್, ಸಿ ಕೆ ಪಾಟೀಲ್ ಸಿ ಏ ಮುಂಬಯಿ, ಗಣೇಶ್ ಶೆಟ್ಟಿ ಸಿ ಎಸ್, ನ್ಯಾಯವಾದಿ ರವಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು, ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿ ಹಾಗೂ ಸೇವಾ ಸಮಿತಿಯ ಸದಸ್ಯರು ಗುರು ಪೂರ್ಣಿಮಾ ಮಹೋತ್ಸವ ಸಾಂಗವಾಗಿ ನಡೆಯುವಲ್ಲಿ ಶ್ರಮಿಸಿದರು.



Related posts

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk