30.9 C
Mumbai
June 8, 2026
Mumbai News Kannada
ತುಳುನಾಡು

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.





ಉಡುಪಿ,ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 21ರಂದು, ಗುರು ಭಕ್ತರ, ಉಪಸ್ಥಿತಿಯಲ್ಲಿ ಭಕ್ತಿ, ಶ್ರದ್ದೆಯಿಂದ,ವಿಜೃಂಭಣೆಯಿಂದ ಜರಗಿತು.
ಅಂದು ಬೆಳ್ಳಿಗೆ 5 ಗಂಟೆಗೆ ಕಾಕಡ ಆರತಿ ಬೆಳಗಳಾಯಿತು.
ನಂತರ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ ನಡೆಯಿತು.
ಮಧ್ಯಾಹ್ನ 12 ಗಂಟೆಗೆ ಶ್ರೀ ನಿತ್ಯಾನಂದ ಸ್ವಾಮಿಗೆ ಮಹಾಪೂಜೆ ನಡೆಯಿತು. ಮಹಾಪೂಜೆಯ ಬಳಿಕ ಬಾಲಾಭೋಜನ ಮತ್ತು ಅನ್ನಸಂತರ್ಪಣೆ ಆರಂಭವಾಯಿತು.


ತಡ ಸಂಜೆ ಪಲ್ಲಕ್ಕಿ ಉತ್ಸವ, ಮಹಾಪೂಜೆಯಾಗಿ ಸೇರಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಗುರು ಪೂರ್ಣಿಮಾ ಮಹೋತ್ಸವದಲ್ಲಿ ಮಂದಿರದ ಆಡಳಿತ ಟ್ರಸ್ಟಿ, ಮುಂಬಯಿಯ ಉದ್ಯಮಿ ಕೆ. ಕೆ ಆವರ್ಸೆಕರ್, ಮಂದಿರ ಮಠದ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ದಿವಾಕರ ಶೆಟ್ಟಿ ತೋಟದಮನೆ, ಕಾರ್ಯದರ್ಶಿ ತೋನ್ಸೆ ನವೀನ್ ಶೆಟ್ಟಿ, ಜಾಯಿಂಟ್ ಎಕ್ಸಿಕ್ಯೂಟಿವ್ ಟ್ರಸ್ಟಿ ಕೆ ಮೋಹನ ಚಂದ್ರ ನಂಬಿಯಾರ್, ಕಾಂಞಂಗಾಡ್‌ ನ ಟ್ರಸ್ಟಿ ಕುಮಾರ್ ಎನ್ ಬಂಗೇರ, ಕೋಶಾಧಿಕಾರಿ ನರಸಿಂಹ ಶೆಣೈ, ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ, ರಮೇಶ್ ಶೆಟ್ಟಿ ಪಾಲ್ಗರ್, ಸಿ ಕೆ ಪಾಟೀಲ್ ಸಿ ಏ ಮುಂಬಯಿ, ಗಣೇಶ್ ಶೆಟ್ಟಿ ಸಿ ಎಸ್, ನ್ಯಾಯವಾದಿ ರವಿ ಕೋಟ್ಯಾನ್ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳು, ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿ ಹಾಗೂ ಸೇವಾ ಸಮಿತಿಯ ಸದಸ್ಯರು ಗುರು ಪೂರ್ಣಿಮಾ ಮಹೋತ್ಸವ ಸಾಂಗವಾಗಿ ನಡೆಯುವಲ್ಲಿ ಶ್ರಮಿಸಿದರು.



Related posts

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಉಡುಪಿ : ಪರ್ಯಾಯ ಆಚರಣೆಯ ಅಂಗವಾಗಿ ನಡೆದ ಧಾನ್ಯ ಮುಹೂರ್ತ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಅಮೀನ್ ಮೂಲಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ವೈಭವ: ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯಗಳು

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk