September 6, 2026
Mumbai News Kannada
ಸುದ್ದಿ

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.





ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು – ಸುಬ್ರಮಣ್ಯ ನಡುವೆ ರೈಲು ಸಂಚಾರ ಮತ್ತೆ ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒಟ್ಟಾಯಿಸಿದ್ದಾರೆ.
ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು ಎಂದು ಸಂಸದರು ಹೇಳಿದರು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ ಎಂದರು.

ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯೊಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಚೌಟರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.



Related posts

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಭಗವಾನ್ ನಿತ್ಯಾನಂದರ 65ನೆಯ ಪುಣ್ಯತಿಥಿ ಸ್ಮರಣೋತ್ಸವ ಆಚರಣೆ

Mumbai News Desk

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk