30 C
Mumbai
April 24, 2026
Mumbai News Kannada
ಪ್ರಕಟಣೆ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.





ಮುಂಬಯಿ : ನಗರದ ಹಿರಿಯ ಸಂಘಟನೆಗಳಲ್ಲಿ ಒಂದಾದ ಕುಲಾಲ ಸಂಘ ಮುಂಬಯಿ ಇದರ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಅ. 4 ರಂದು ಸಂಜೆ 4 ರಿಂದ ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮವನ್ನು ಗೋರೆಗಾಂವ್ ಪೂರ್ವದ ಜೆ. ಪಿ. ನಗರ ರೋಡ್ ನಂಬರ್ ೨ ಫ್ರಾಗ್ನ್ಯ ಬೋಧಿನಿ ಹೈಸ್ಕೂಲ್ ಇಲ್ಲಿ ಕುಲಾಲ ಸಂಘ ಮುಂಬಯಿ ಅಧ್ಯಕ್ಷರಾದ ರಘು ಎ. ಮೂಲ್ಯ, ಪಾದೆ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಕುಲಾಲ ಸಂಘ ಮುಂಬಯಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಮಲಾಡ್ ಪೂರ್ವದ ಗೋವಿಂದ್ ನಗರದ ಆಜಿ ಬಾಬೂ ರೋಡ್ ನಲ್ಲಿರುವ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ (ಉನ್ನತಾಧಿಕಾರಿ) ಜಯ ಮೋಹನ್ ಬಂಗೇರ ಆಗಮಿಸಲಿರುವರು.

ಸಂಘದ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಗೌರವ ಅಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಉಪಾಧ್ಯಕ್ಷರಾದ ಡಿ. ಐ. ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಬಿ. ಸಾಲಿಯಾನ್, ಗೌರವ ಕೋಶಾಧಿಕಾರಿ ಜಯ ಎಸ್. ಅಂಚನ್, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಪರವಾಗಿ ಕಾರ್ಯಾಧ್ಯಕ್ಷ ಆನಂದ ಕುಲಾಲ್, ಉಪ ಕಾರ್ಯಾಧ್ಯಕ್ಷ ಅರುಣ್ ಬಂಗೇರ, ಕಾರ್ಯದರ್ಶಿ ಸತೀಶ್ ಬಂಗೇರ, ಕೋಶಾಧಿಕಾರಿ ಮುಂಡಪ್ಪ ಮೂಲ್ಯ, ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಪರವಾಗಿ ಕಾರ್ಯಾಧ್ಯಕ್ಷೆ ಆಶಾಲತಾ ಮೂಲ್ಯ, ಉಪ ಕಾರ್ಯಾಧ್ಯಕ್ಷೆ ರತ್ನ ಡಿ. ಕುಲಾಲ್, ಕಾರ್ಯದರ್ಶಿ ಆರತಿ ಸಾಲ್ಯಾನ್, ಕೋಶಾಧಿಕಾರಿ ಭಾರತಿ ಆರ್ಖ್ಯಾನ್ , ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಪುಷ್ಪ ಕುಲಾಲ್, ಎಲ್ಲಾ ಸಮಿತಿಗಳ ಸದಸ್ಯರು, ಮಹಿಳಾ ವಿಭಾಗ ಹಾಗು ಯುವ ವಿಭಾಗವು ವಿನಂತಿಸಿದೆ.




Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”

Mumbai News Desk

ಶ್ರೀ ರಜಕ ಸಂಘ ಮುಂಬಯಿ (ರಿ), ಜು. 21 ರಂದು 85ನೇ ವಾರ್ಷಿಕ ಮಹಾಸಭೆ

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk