32 C
Mumbai
April 24, 2026
Mumbai News Kannada
ತುಳುನಾಡು

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ ವಿತರಣೆ





ಕಾಪು, ಆ. 4: ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ರವಿವಾರ ಕಾಪು ಪೇಟೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹಾಲೆ ಮರದ ತೊಗಟೆಯ ಕಷಾಯವನ್ನು‌ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿಯ ಸದಸ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಮುಂಜಾನೆ ಬೆಳಪುವಿನಿಂದ ಸಂಗ್ರಹಿಸಿ ತಂದ ಹಾಲೆ ಮರದ ತೊಗಟೆಯಲ್ಲಿ ಸುಮಾರು 100 ಲೀಟರ್ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಅದರ ಜತೆಗೆ ಮೆಂತೆ‌ ಪಾಯಸವನ್ನೂ ಸರ್ವಧರ್ಮೀಯರಿಗೆ ವಿತರಿಸಲಾಯಿತು.

ಬಿರುವೆರ್ ಕಾಪು ಸೇವಾ ಸಮಿತಿ ಗೌರವಾಧ್ಯಕ್ಷ ಭಾಸ್ಕರ್ ಅಂಚನ್, ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್, ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್, ಪದಾಧಿಕಾರಿಗಳಾದ ವಿಕ್ಕಿ ಪೂಜಾರಿ ಮಡುಂಬು, ಅತಿಥ್ ಸುವರ್ಣ ಪಾಲಮೆ, ದೀಪಕ್ ಕುಮಾರ್ ಎರ್ಮಾಳು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸುಜನ್ ಎಲ್. ಸುವರ್ಣ, ಅನಿಲ್‌ ಅಮೀನ್‌ ಕಾಪು, ಅಶ್ವಿನಿ ನವೀನ್, ಸಂಧ್ಯಾ ಬಿ. ಕೋಟ್ಯಾನ್, ಇನ್ನಂಜೆ ಬಿಲ್ಲವ‌ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ, ಸ್ಥಳೀಯರಾದ ಶಿವಾನಂದ ಪೂಜಾರಿ ಮುನ್ನ, ರಮೇಶ್ ಪೂಜಾರಿ‌ ಮಲ್ಲಾರು, ಅಶ್ವಿನಿ ಜಿ. ಕೋಟ್ಯಾನ್, ಸಂದೇಶ್ ಪೂಜಾರಿ, ರವಿ ಪೂಜಾರಿ ಮೊದಲಾದವರು ಸಹಕರಿಸಿದರು.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮೂಲ್ಕಿ : ಆಗಸ್ಟ್ 17ರಂದು ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk