32 C
Mumbai
March 7, 2026
Mumbai News Kannada
ಸುದ್ದಿ

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.





   ಬೊಯಿಸರ್ : ತಾ.08 ಆಗಸ್ಟ್ 2024 ರಂದು ಬೊಯಿಸರ್ ಪಶ್ಚಿಮದಲ್ಲಿಯ ನಾವಾಪುರ ರೋಡ್ ನ    ಪ್ರಸಿದ್ಧ ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಅವಧೂತ ಶ್ರೀ ನಿತ್ಯಾನಂದ ಸ್ವಾಮೀಜಿಯವರ 63ನೇ ಪುಣ್ಯತಿಥಿಯನ್ನು ಆಚರಿಸಲಾಯಿತು.

ಪ್ರಾತಃಕಾಲ 6 ಗಂಟೆಗೆ ಗಣಹೋಮವನ್ನು ಶ್ರೀಮತಿ ಪದ್ಮಾವತೀ ಮತ್ತು ಸತ್ಯಾ ಕೋಟ್ಯಾನ್ ನೆರವೇರಿಸಿದರು. ಬಳಿಕ 7 ಕ್ಕೆ ಪಂಚಾಮೃತ ಕಲಶ ಅಭಿಷೇಕ   ಹಾಗೂ  ಭಕ್ತಾಭಿಮಾನಿಗಳಿಂದ ಸೀಯಾಳಾಭಿಷೇಕ ಕಾರ್ಯಕ್ರಮ ಜರಗಿತು.

           9.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಜರಗಿತು. ಮಂದಿರದ ವಿಶ್ವಸ್ಥ ಮಂಡಳಿಯ ಶ್ರೀನಿವಾಸ್ ಕೋಟ್ಯಾನ್ ” 13 ವರ್ಷಗಳ ಹಿಂದೆ ಸ್ಥಾಪನೆ ಆಗಿ ಲೋಕಾರ್ಪಣೆಗೊಂಡ ಬಳಿಕ ಶೃದ್ಧಾಳು ಭಕ್ತಾದಿಗಳ ಸತತ ಧಾರ್ಮಿಕ ಚಟುವಟಿಕೆಗಳಿಂದ ಈ ಮಂದಿರದ ಸ್ಥಳಕ್ಕೊಂದು ಪವಿತ್ರ ಕ್ಷೇತ್ರದ ಕಳೆ ಬಂದಿದೆ. ಪರಮಪೂಜ್ಯ ಸ್ವಾಮಿ  ನಿತ್ಯಾನಂದರ 63 ನೆಯ ಪುಣ್ಯತಿಥಿಯ ಸಂದರ್ಭದಲ್ಲಿ ಮಂದಿರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸರ್ವಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪವಿತ್ರ ಶ್ರಾವಣ ಮಾಸದಲ್ಲಿ ಜರಗಿದ ಈ ಸಾಮೂಹಿಕ ಸತ್ಯನಾರಾಯಣ ಮಹಾಪೂಜೆಯು ಸರ್ವಮಂಗಳವನ್ನುಂಟು ಮಾಡಲಿ ” ಎಂದು ನುಡಿದು ಭಕ್ತಾಭಿಮಾನಿಗಳ ಪರವಾಗಿ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ    ವಿಧಿ ವಿಧಾನಗಳನ್ನು ಹರೀಶ್ ಶಾಂತಿ ಹೆಜಮಾಡಿ ಮತ್ತು ರಾಜೇಶ್ ಶಾಂತಿ ಇವರು ಜರಗಿಸಿದರು. 

  ಈ ಕಾರ್ಯಕ್ರಮದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರು , ಸ್ಥಳೀಯ ಹಾಗೂ ವಿವಿಧ ಊರುಗಳಿಂದ ಆಗಮಿಸಿದ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು , ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಮತ್ತು ಶ್ರೀ ಸ್ವಾಮಿ ನಿತ್ಯಾನಂದ ಭಕ್ತ ಮಂಡಳಿಯ ಸದಸ್ಯರು ಹಾಗೂ ತುಳು ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಉಸ್ತುವಾರಿಯಲ್ಲಿ ರಮಾನಂದ ಪೂಜಾರಿ ಮತ್ತು ಸೇವಾ ಬಳಗದ ಸದಸ್ಯರು ಸಹಕರಿಸಿದರು.

ಮದ್ಯಾಹ್ನದ ಮಹಾ ಮಂಗಳಾರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆಯು ಜರಗಿತು.

ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್ ಡಹಾಣೂ ರೋಡ್

8483980035



Related posts

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ

Mumbai News Desk

ಮುಲ್ಕಿಯ ಜನಪ್ರಿಯ ಡ್ರೈ ಫ್ರುಟ್ಸ್ ಸ್ಟೋರ್, ಕ್ಯಾನ್ ಕೋಸ್ (KANCOS)ವತಿಯಿಂದ “ಗಿವ್ ಅವೇ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk