30.9 C
Mumbai
June 8, 2026
Mumbai News Kannada
ಸುದ್ದಿ

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.





   ಬೊಯಿಸರ್ : ತಾ.08 ಆಗಸ್ಟ್ 2024 ರಂದು ಬೊಯಿಸರ್ ಪಶ್ಚಿಮದಲ್ಲಿಯ ನಾವಾಪುರ ರೋಡ್ ನ    ಪ್ರಸಿದ್ಧ ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಅವಧೂತ ಶ್ರೀ ನಿತ್ಯಾನಂದ ಸ್ವಾಮೀಜಿಯವರ 63ನೇ ಪುಣ್ಯತಿಥಿಯನ್ನು ಆಚರಿಸಲಾಯಿತು.

ಪ್ರಾತಃಕಾಲ 6 ಗಂಟೆಗೆ ಗಣಹೋಮವನ್ನು ಶ್ರೀಮತಿ ಪದ್ಮಾವತೀ ಮತ್ತು ಸತ್ಯಾ ಕೋಟ್ಯಾನ್ ನೆರವೇರಿಸಿದರು. ಬಳಿಕ 7 ಕ್ಕೆ ಪಂಚಾಮೃತ ಕಲಶ ಅಭಿಷೇಕ   ಹಾಗೂ  ಭಕ್ತಾಭಿಮಾನಿಗಳಿಂದ ಸೀಯಾಳಾಭಿಷೇಕ ಕಾರ್ಯಕ್ರಮ ಜರಗಿತು.

           9.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಜರಗಿತು. ಮಂದಿರದ ವಿಶ್ವಸ್ಥ ಮಂಡಳಿಯ ಶ್ರೀನಿವಾಸ್ ಕೋಟ್ಯಾನ್ ” 13 ವರ್ಷಗಳ ಹಿಂದೆ ಸ್ಥಾಪನೆ ಆಗಿ ಲೋಕಾರ್ಪಣೆಗೊಂಡ ಬಳಿಕ ಶೃದ್ಧಾಳು ಭಕ್ತಾದಿಗಳ ಸತತ ಧಾರ್ಮಿಕ ಚಟುವಟಿಕೆಗಳಿಂದ ಈ ಮಂದಿರದ ಸ್ಥಳಕ್ಕೊಂದು ಪವಿತ್ರ ಕ್ಷೇತ್ರದ ಕಳೆ ಬಂದಿದೆ. ಪರಮಪೂಜ್ಯ ಸ್ವಾಮಿ  ನಿತ್ಯಾನಂದರ 63 ನೆಯ ಪುಣ್ಯತಿಥಿಯ ಸಂದರ್ಭದಲ್ಲಿ ಮಂದಿರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸರ್ವಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪವಿತ್ರ ಶ್ರಾವಣ ಮಾಸದಲ್ಲಿ ಜರಗಿದ ಈ ಸಾಮೂಹಿಕ ಸತ್ಯನಾರಾಯಣ ಮಹಾಪೂಜೆಯು ಸರ್ವಮಂಗಳವನ್ನುಂಟು ಮಾಡಲಿ ” ಎಂದು ನುಡಿದು ಭಕ್ತಾಭಿಮಾನಿಗಳ ಪರವಾಗಿ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ    ವಿಧಿ ವಿಧಾನಗಳನ್ನು ಹರೀಶ್ ಶಾಂತಿ ಹೆಜಮಾಡಿ ಮತ್ತು ರಾಜೇಶ್ ಶಾಂತಿ ಇವರು ಜರಗಿಸಿದರು. 

  ಈ ಕಾರ್ಯಕ್ರಮದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರು , ಸ್ಥಳೀಯ ಹಾಗೂ ವಿವಿಧ ಊರುಗಳಿಂದ ಆಗಮಿಸಿದ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು , ಸದ್ಗುರು ನಿತ್ಯಾನಂದ ಭಜನಾ ಮಂಡಳಿ ಮತ್ತು ಶ್ರೀ ಸ್ವಾಮಿ ನಿತ್ಯಾನಂದ ಭಕ್ತ ಮಂಡಳಿಯ ಸದಸ್ಯರು ಹಾಗೂ ತುಳು ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಉಸ್ತುವಾರಿಯಲ್ಲಿ ರಮಾನಂದ ಪೂಜಾರಿ ಮತ್ತು ಸೇವಾ ಬಳಗದ ಸದಸ್ಯರು ಸಹಕರಿಸಿದರು.

ಮದ್ಯಾಹ್ನದ ಮಹಾ ಮಂಗಳಾರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆಯು ಜರಗಿತು.

ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್ ಡಹಾಣೂ ರೋಡ್

8483980035



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ, ಸಂಸದರಿಗೆ ಮನವಿ

Mumbai News Desk