September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯಲ್ಲಿ ಆಟಿದ ನೆನಪು ಕಾರ್ಯಕ್ರಮ.





ಅಸೋಸಿಯೇಷನ್ ನಾಡಿನ ಸಂಸ್ಕೃತಿಯ ಬೆಳೆಸುವಿಕೆಗೆ ಸದಾ ಪ್ರೋತ್ಸಾಹ ನೀಡುತ್ತಿದೆ- ಹರೀಶ್ ಜಿ ಅಮೀನ್.

ಚಿತ್ರ, ವರದಿ: ಉಮೇಶ್ ಕೆ.ಅಂಚನ್.

ಹಿಂದಿನ ಆಟಿ ತಿಂಗಳನ್ನು ನೆನಪಿಸುವಂತಹ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದ ತಮಗೆಲ್ಲರಿಗೂ ಅಭಿನಂದನೆಗಳು. ಇದರಿಂದ ನನ್ನಂತೆ ಮುಂಬಯಿಯಲ್ಲಿ ಹುಟ್ಟಿ ಬೆಳೆದವರಿಗೆ ಊರಿನ ಸಂಸ್ಕೃತಿ, ಆಚರಣೆ ತಿಳಿಯಲು ಸಾಧ್ಯವಾಗುತ್ತದೆ. ಬಿಲ್ಲವರ ಅಸೋಸಿಯೇಶನ್ ತುಳುನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಹ ಕಾರ್ಯಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದೆ ಹಾಗೂ ಸಮಾಜಪರ ಕಾರ್ಯಗಳಿಗೆ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡು ನಡೆಯುತ್ತಿದೆ. ಅಸೋಸಿಯೇಶನಿನ ಪ್ರಗತಿಗೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಬಿಲ್ಲವರ ಅಸೋಸಿಯೇಶನಿನ ಅದ್ಯಕ್ಷ ಹರೀಶ್ ಜಿ.ಅಮೀನ್ ಹೇಳಿದರು.
ಅವರು ಅ.11ರಂದು ಬಿಲ್ಲವರ ಅಸೋಸಿಯೇಶನಿನ ಬಾಂಡುಪ್ ಸ್ಥಳೀಯ ಕಚೇರಿಯವರು ಆಯೋಜಿಸಿದ್ದ ‘ಆಟಿದ ನೆನಪು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಕಚೇರಿಯ ಶೈಕ್ಷಣಿಕ ಉಪಸಮಿತಿಯ ಕಾರ್ಯದರ್ಶಿ ಹರೀಶ್ ಪೂಜಾರಿ ಕೊಕ್ಕರ್ಣೆಯವರು ಹಿಂದಿನ ಹಾಗೂ ಇಂದಿನ ಆಟಿ ತಿಂಗಳ ಬಗ್ಗೆ ಮಾಹಿತಿ ನೀಡಿದರು.
ಬಿಲ್ಲವರ ಅಸೋಸಿಯೇಶನ್ ಇದರ ಉಪಾಧ್ಯಕ್ಷೆ ಜಯಂತಿ ವರದ್ ಉಳ್ಳಾಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ.ಕೋಟ್ಯಾನ್ ಸಂದರ್ಭೋಚಿತವಾಗಿ ಮಾತನಾಡಿದರು.
ಸ್ಥಳೀಯ ಸಮಿತಿಯ ಉಪಾಧ್ಯಕ್ಷ ಎಮ್.ಬಿ.ಸನಿಲ್ ಮಾತನಾಡಿ ಸಮಾಜಕ್ಕೆ ಒಳ್ಳೆಯ ನೇತೃತ್ವವನ್ನು ಅದ್ಯಕ್ಷರಾದ ಹರೀಶ್ ಜಿ. ಅಮೀನ್ ರವರು ನೀಡಿದ್ದಾರೆ. ಸಮಾಜವನ್ನು ಮತ್ತಷ್ಟು ಬಲಿಷ್ಠ ಗೊಳಿಸಲು ಅವರಿಗೆ ನಾವೆಲ್ಲ ಸಹಕರಿಸೋಣ ಎಂದರು


ವೇದಿಕೆಯಲ್ಲಿ ಕೇಂದ್ರ ಯವಾಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನೀಲೇಶ್ ಪೂಜಾರಿ ಪಲಿಮಾರು, ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಂಕರ್ ಪೂಜಾರಿ, ಮೋಹನ್ ಕೋಟ್ಯಾನ್, ಸ್ಥಳೀಯ ಕಚೇರಿಯ ಗೌರವಾಧ್ಯಕ್ಷ ಶೇಖರ್ ಎಮ್.ಪೂಜಾರಿ , ಕೋಶಾಧಿಕಾರಿ ಕೆ.ಎ.ಪೂಜಾರಿ ಉಪಸ್ಥಿತರಿದ್ದರು.
ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಜನಾರ್ದನ ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸದಾನಂದ್ ಪೂಜಾರಿ ವಂದಿಸಿದರು.


ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಸದಸ್ಯೆಯರಿಂದ ನಾಟಿ ನೃತ್ಯ, ವೇದ ಸುವರ್ಣ ಮತ್ತು ರುಕ್ಮಿಣಿ ಸುವರ್ಣರವರಿಂದ ಆಟಿಕಡಂಜ ನೃತ್ಯ ನಡೆಯಿತು. ಪರಿಸರದ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ದಾನಿಗಳನ್ನು ಸತ್ಕರಿಸಲಾಯಿತು. ಮಹಿಳಾ ವಿಭಾಗದ ಸದಸ್ಯೆಯರಿಂದ ಆಟಿ ತಿಂಗಳಲ್ಲಿ ಲಭಿಸುವ ಸುಮಾರು 34 ಬಗೆಯ ತಿಂಡಿ ತಿನಿಸುಗಳೊಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.



Related posts

ಬಿಲ್ಲವರ ಅಸೋಸಿಯೇಷನ್‌ನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಉತ್ಸವ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ

Mumbai News Desk

ಅಂಧೇರಿ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ವತಿಯಿಂದ ಒಡಿಯೂರು ಶ್ರೀ ಗಳಿಗೆ ಗುರುವಂದನೆ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ  ಸಭಾದ ಮಹಿಳಾ ವಿಭಾಗದಿಂದ ಸಡಗರದ ‘ಆಟಿಡೊಂಜಿ ಕೂಟ’ ಆಚರಣೆ

Mumbai News Desk

ಸದ್ಗುರು ಅನಿರುದ್ಧ ಕನ್ನಡ ಉಪಾಸನಾ ಕೇಂದ್ರದ ಧಾರ್ಮಿಕ ಪ್ರವಾಸ.

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ –  35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk