30.5 C
Mumbai
June 8, 2026
Mumbai News Kannada
ಸುದ್ದಿ

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ





ಉಡುಪಿ ಜಿಲ್ಲೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶವಿಲ್ಲದೆ ಇದ್ದು ಸಾರ್ವಜನಿಕರು ಸಂಕಷ್ಟಕ್ಕೆ ಈಡಾಗಿರುತ್ತಾರೆ. ಪಡುಬಿದ್ರೆ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೆಜಮಾಡಿ, ಎರ್ಮಾಳು, ತೆಂಕ, ಬೆಳಪು, ಶಿರ್ವ, ಮುದರಂಗಡಿ ಹಾಗೂ ಕಾರ್ಕಳದ ಕಡೆಯಿಂದ ನೂರಾರು ಜನರು ಬಾಂಬೆಯಿಂದ ಪ್ರಯಾಣಿಸುವರಿಗೆ ಪಡುಬಿದ್ರೆ ಮಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ತ್ವಗಂಧ ರೈಲ್ವೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮುಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ. ಆದ್ದರಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಬಿದ್ರೆ ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಲ್ಲಿ ಸೂಕ್ತ ಕ್ರಮ ವಹಿಸುವಂತೆ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಪುರಸಭೆ ಸದಸ್ಯರಾದ ಹರಿಣಾಕ್ಷಿ, ಶೈಲೇಶ್, ರತ್ನಾಕರ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



Related posts

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk