April 2, 2025
ಪ್ರಕಟಣೆ

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.


ಮುಂಬಯಿ ಪರಿಸರದ ಹಿರಿಯ ಸಮಾಜ ಸೇವಕ, ಸಂಘಟಕ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಭಾಯಂದರ್ ನಿವಾಸಿ ಚಿತ್ರಾಪು ಕೆ.ಎಮ್.ಕೋಟ್ಯಾನ್(ಗೌ.ಕಾರ್ಯದರ್ಶಿ ವಿದ್ಯಾದಾಯಿನಿ ಸಭಾ, ಮುಂಬಯಿ)ರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮವು ಆದಿತ್ಯವಾರ ಅ.25ರಂದು ಸಾಯಂಕಾಲ 4.30ರಿಂದ ಭಾಯಂದರ್ ಪೂರ್ವದ ನವಘರ್ ರಸ್ತೆಯಲ್ಲಿರುವ ಹನುಮಾನ್ ಮಂದಿರದ ಸಮೀಪ ಹಾಗೂ ಎಸ್.ಎನ್.ಕಾಲೇಜಿನ ಎದುರುಗಡೆ ಇರುವ ಸೈಂಟ್ ಅಗ್ನಿಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಪ್ರಿಯ ಬಳಗ ಮೀರಾಭಾಯಂದರ್ ಇವರಿಂದ ಕುಶ – ಲವ ಕಾಳಗ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೆ.ಎಮ್ ರವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಕೆ.ಎಮ್.ಕೋಟ್ಯಾನ್ ಅಭಿನಂದನಾ ಬಳಗದ ಪರವಾಗಿ ಜಿ.ಟಿ.ಆಚಾರ್ಯ, ಡಾ.ಸತೀಶ್ ಬಂಗೇರ, ಡಾ.ಪ್ರಕಾಶ್ ಕುಮಾರ್ ಮೂಡಬಿದ್ರೆ, ಅಶೋಕ್ ಶೆಟ್ಟಿ ಬಿಇಎಸ್ಟಿ ಹಾಗೂ ಪ್ರೇಮಾ ಮಾಧವ ಹೆಗ್ಡೆ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ..9324759589 ಅಥವಾ 9769797495ರಲ್ಲಿ ವಿಚಾರಿಸಬಹುದು.

Related posts

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಪೇಜಾವರ ಮಠದಲ್ಲಿ ಹರಿಕಥಾ ವಿದ್ವಾನ್ “ವಿಶ್ವೇಶ ದಾಸ” ಕೈರ ಬೆಟ್ಟು ವಿಶ್ವನಾಥ್ ಭಟ್ ಅವರ  “ತ್ರಿದಿನ ಹರಿಕಥಾ ಸಂಕೀರ್ತನೆ”

Mumbai News Desk