30.9 C
Mumbai
June 8, 2026
Mumbai News Kannada
ಪ್ರಕಟಣೆ

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.






ಮುಂಬಯಿ ಪರಿಸರದ ಹಿರಿಯ ಸಮಾಜ ಸೇವಕ, ಸಂಘಟಕ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಭಾಯಂದರ್ ನಿವಾಸಿ ಚಿತ್ರಾಪು ಕೆ.ಎಮ್.ಕೋಟ್ಯಾನ್(ಗೌ.ಕಾರ್ಯದರ್ಶಿ ವಿದ್ಯಾದಾಯಿನಿ ಸಭಾ, ಮುಂಬಯಿ)ರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮವು ಆದಿತ್ಯವಾರ ಅ.25ರಂದು ಸಾಯಂಕಾಲ 4.30ರಿಂದ ಭಾಯಂದರ್ ಪೂರ್ವದ ನವಘರ್ ರಸ್ತೆಯಲ್ಲಿರುವ ಹನುಮಾನ್ ಮಂದಿರದ ಸಮೀಪ ಹಾಗೂ ಎಸ್.ಎನ್.ಕಾಲೇಜಿನ ಎದುರುಗಡೆ ಇರುವ ಸೈಂಟ್ ಅಗ್ನಿಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಪ್ರಿಯ ಬಳಗ ಮೀರಾಭಾಯಂದರ್ ಇವರಿಂದ ಕುಶ – ಲವ ಕಾಳಗ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೆ.ಎಮ್ ರವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಕೆ.ಎಮ್.ಕೋಟ್ಯಾನ್ ಅಭಿನಂದನಾ ಬಳಗದ ಪರವಾಗಿ ಜಿ.ಟಿ.ಆಚಾರ್ಯ, ಡಾ.ಸತೀಶ್ ಬಂಗೇರ, ಡಾ.ಪ್ರಕಾಶ್ ಕುಮಾರ್ ಮೂಡಬಿದ್ರೆ, ಅಶೋಕ್ ಶೆಟ್ಟಿ ಬಿಇಎಸ್ಟಿ ಹಾಗೂ ಪ್ರೇಮಾ ಮಾಧವ ಹೆಗ್ಡೆ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ..9324759589 ಅಥವಾ 9769797495ರಲ್ಲಿ ವಿಚಾರಿಸಬಹುದು.



Related posts

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk