July 23, 2026
Mumbai News Kannada
ಪ್ರಕಟಣೆ

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.








ಮುಂಬಯಿ ಪರಿಸರದ ಹಿರಿಯ ಸಮಾಜ ಸೇವಕ, ಸಂಘಟಕ, ಹಲವಾರು ಸಂಘಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಭಾಯಂದರ್ ನಿವಾಸಿ ಚಿತ್ರಾಪು ಕೆ.ಎಮ್.ಕೋಟ್ಯಾನ್(ಗೌ.ಕಾರ್ಯದರ್ಶಿ ವಿದ್ಯಾದಾಯಿನಿ ಸಭಾ, ಮುಂಬಯಿ)ರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮವು ಆದಿತ್ಯವಾರ ಅ.25ರಂದು ಸಾಯಂಕಾಲ 4.30ರಿಂದ ಭಾಯಂದರ್ ಪೂರ್ವದ ನವಘರ್ ರಸ್ತೆಯಲ್ಲಿರುವ ಹನುಮಾನ್ ಮಂದಿರದ ಸಮೀಪ ಹಾಗೂ ಎಸ್.ಎನ್.ಕಾಲೇಜಿನ ಎದುರುಗಡೆ ಇರುವ ಸೈಂಟ್ ಅಗ್ನಿಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಪ್ರಿಯ ಬಳಗ ಮೀರಾಭಾಯಂದರ್ ಇವರಿಂದ ಕುಶ – ಲವ ಕಾಳಗ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಕೆ.ಎಮ್ ರವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಕೆ.ಎಮ್.ಕೋಟ್ಯಾನ್ ಅಭಿನಂದನಾ ಬಳಗದ ಪರವಾಗಿ ಜಿ.ಟಿ.ಆಚಾರ್ಯ, ಡಾ.ಸತೀಶ್ ಬಂಗೇರ, ಡಾ.ಪ್ರಕಾಶ್ ಕುಮಾರ್ ಮೂಡಬಿದ್ರೆ, ಅಶೋಕ್ ಶೆಟ್ಟಿ ಬಿಇಎಸ್ಟಿ ಹಾಗೂ ಪ್ರೇಮಾ ಮಾಧವ ಹೆಗ್ಡೆ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ. ಕೋಟ್ಯಾನರ ಅಭಿಮಾನಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ..9324759589 ಅಥವಾ 9769797495ರಲ್ಲಿ ವಿಚಾರಿಸಬಹುದು.



Related posts

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ

Mumbai News Desk

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk