September 6, 2026
Mumbai News Kannada
ತುಳುನಾಡು

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.





ಮೀನುಗಾರಿಕಾ ರಜೆ ಮುಗಿದ ಬಳಿಕ ಪ್ರಕ್ಷುಬ್ದಗೊಂಡಿರುವ ಸಮುದ್ರ ರಾಜನನ್ನು ಶಾಂತಗೊಳಿಸುವ ಸಾಂಪ್ರದಾಯವೇ ಸಮುದ್ರ ಪೂಜೆ. ಪ್ರತಿ ವರ್ಷ ನೂಲಾ ಹುಣ್ಣಿಮೆಯಂದು ಮೀನುಗಾರರು ಸಮುದ್ರ ಪೂಜೆ ಮಾಡುವ ಸಂಪ್ರದಾಯವಿದೆ

ಅದರಂತೆ ಇಂದು ಬೆಳ್ಳಿಗೆ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಮುದ್ರ ಪೂಜೆ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಈ ಬಾರಿಯ ಮೀನುಗಾರಿಕಾ ಋತುವಿನಲ್ಲಿ ಹೇರಳ ಮತ್ಸ್ಯ ಸಂಪತ್ತಿನ ಮೂಲಕ ಮೀನುಗಾರರ ಬದುಕು ಸಮೃದ್ಧವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ವಿವಿಧ ಮೀನುಗಾರ ಸಂಘಟನೆಗಳ ಪ್ರಮುಖರು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.



Related posts

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಕಾಪು: ಸಹಕಾರ ತರಬೇತಿ ಕಾರ್ಯಕ್ರಮ ಯಶಸ್ವಿ ಚಾಲನೆ

Mumbai News Desk

ರಾಮನ ಸೇವೆಯೇ ರಾಷ್ಟ್ರಸೇವೆ: ಒಡಿಯೂರು ಶ್ರೀ

Mumbai News Desk

ಕುಲಾಲ ಪರ್ಬ ಉದ್ಘಾಟನೆ.

Mumbai News Desk

ಮುಲ್ಕಿ : ಕೊಳಚಿಕಂಬಳ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ ಸಂಪನ್ನ

Mumbai News Desk

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk