July 23, 2026
Mumbai News Kannada
ಪ್ರಕಟಣೆ

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ







ಮುಂಬಯಿ ಅ22. ನಗರದ ಪ್ರತಿಷ್ಟಿತ ಜಾತಿಯ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಷಿಯೇಶನ್ ಪ್ರತಿ ವರ್ಷ ನೀಡುತ್ತಿರುವ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ ಕಾರ್ಯಕ್ರಮವು ಆಗಸ್ಟ್ 25ರಂದು ರವಿವಾರ ಜುಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾ ಗ್ರಹದಲ್ಲಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಉದ್ಯಮಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ಹೇರಂಬ ಕೆಮಿಕಲ್ಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು ಭಾಗವಹಿಸಲಿರುವರು. ಗೌರವ ಅತಿಥಿಗಳಾಗಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ವಿಕೆ ಗ್ರೂಪ ಕಂಪನಿ ಸಿಎಂಡಿ ಕೆಎಂ ಶೆಟ್ಟಿ, ಕೃಷ್ಣ ಪ್ಯಾಲೆಸ್ ಗ್ರೂಪ್ ಹೋಟೆಲ್ ಸಿ ಎಂ ಡಿ ಕೃಷ್ಣ ವೈ ಶೆಟ್ಟಿ, ಆನಂದ ಶೆಟ್ಟಿ
ಮುಖ್ಯಸ್ಥರು ನೊವೊ ನೊರ್ಡಿಸ್ಕ್, ಆಗ್ನೇಯ ಏಷ್ಯಾ.
ಸಿಂಗಾಪುರ ತುಂಗಾ ಆಸ್ಪತ್ರೆಯ ನಿರ್ದೇಶಕ ಜವಾಬ್ ಸಂಸ್ಥೆಯ ಅಧ್ಯಕ್ಷ ರಾಜೇಶ್ ಶೆಟ್ಟಿ, ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ಮಾಜಿನಗರ ಸೇವಕ ಸುರೇಶ್ ಜಿ ಶೆಟ್ಟಿ, ಭಾಗವಹಿಸುವರು.

ಮಧ್ಯಾಹ್ನ ಗಂಟೆ 3ರಿಂದ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಯಕ್ಷ ಗುರು ಅಜೆಕಾರ ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಶ್ರೀದೇವಿ ಲಲಿತೋಪಕ್ಯಾನ ಯಕ್ಷಗಾನ ಪ್ರದರ್ಶನಗೊಳ್ಳಲಿರುವುದು.

ಈ ಎಲ್ಲ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ವಿದ್ಯಾರ್ಥಿಗಳು ಭಾಗವಹಿಸಬೇಕೆಂದು.ಬಾಂಬೆ ಬಂಟ್ಸ್ ಅಸೋಷಿಯೇಶನಿನ ಉಪಾಧ್ಯಕ್ಷ ಅಡ್ವಕೇಟ್ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ, ಐಕಳ ಕಿಶೋರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಎಸ್ ಶೆಟ್ಟಿ , ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಕೆ ಸುರೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ್ ಡಿ ಶೆಟ್ಟಿ, ಜೊತೆ ಕೂಶಾಧಿಕಾರಿ ಸಿ ಎ ದಿವಾಕರ್ ಕೆ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ವಿ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಎಸ್ ಶೆಟ್ಟಿ , ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಕೆ ಶೆಟ್ಟಿ ,ಮೊದಲಾದವರು ವಿನಂತಿಸಿಕೊಂಡಿದ್ದಾರೆ.



Related posts

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಫೆ. 18 ರಂದು ನಕುಲ್ ನಿವಾಸ್ ಮತ್ತು ದ್ವಾರಕನಾಥ್ ನಿವಾಸ್ ಆಯಿರೆ ಗಾಂವ್, ಡೊಂಬಿವಲಿಯ 29 ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ, ನೃತ್ಯ ವೈಭವ, ಸನ್ಮಾನ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk