30.9 C
Mumbai
June 8, 2026
Mumbai News Kannada
ಸುದ್ದಿ

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು





ಕಂಬದಕೋಣೆ,ಕಾಲ್ತೊಡು : ದಿನಾಂಕ 23 ಆಗಸ್ಟ್ 2024 ರ ಶುಕ್ರವಾರ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ಕಾಲ್ತೋಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಡಾಕ್ ಸೇವಾ; ಜನ್ ಸೇವಾ-ಅಂಚೆ ಜನ ಸಂಪರ್ಕ ಅಭಿಯಾನವನ್ನು ಕಾಲ್ತೊಡು ಅಂಬೇಡ್ಕರ್‍-ಭವನದಲ್ಲಿ ಆಯೋಜಿಸಲಾಗಿತ್ತು. ಅಭಿಯಾನವನ್ನು ಜ್ಯೊತಿ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದ ಪಂಚಾಯತ್ ಅಧ್ಯಕ್ಷ ಅಣ್ಣಪ್ಫ ಶೆಟ್ಟಿ ಬಟ್ನಾಡಿ ಇಂತಹ ಕುಗ್ರಾಮದಲ್ಲೂ ಕೂಡ ಅಂಚೆ ಅಭಿಯಾನವನ್ನು ಆಯೋಜಿಸಿದಕ್ಕಾಗಿ ಅಂಚೆ ಇಲಾಖೆಯನ್ನು ಶ್ಲಾಘಿಸಿದರು. ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು. ಅಂಚೆ ಅಧೀಕ್ಷಕ ರಮೇಶ್ ಪ್ರಭು, ಮತ್ತೊರ್ವ ಸಹಾಯಕ ಅಂಚೆ ಅಧೀಕ್ಷಕರಾದ ದಯಾನಂದ ದೇವಾಡಿಗ, ಪಿ.ಡಿ.ಓ. ದಿವಾಕರ ಶಾನುಭೋಗ ಮತ್ತು ಹೇರೂರು ಪಂಚಾಯತ್ ಸದಸ್ಯ ಸೂಲಿಯಣ್ಣ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಆನಂದ್ ಬಿಲ್ಲವ ಕಾರ್ಯಕ್ರಮವನ್ನು ನಿರ್ವಹಿಸಿದರು. ನೂರಾರು ಗ್ರಾಮಸ್ತರು ಆಧಾರ್ ಹೊಸ ನೊಂದಣಿ/ಪರಿಷ್ಕರಣೆ ಹಾಗು ವಿವಿಧ ಅಂಚೆ ಸೌಲಭ್ಯಗಳ ಮಾಹಿತಿಯ ಪ್ರಯೋಜನವನ್ನು ಪಡೆದರು.



Related posts

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk