September 6, 2026
Mumbai News Kannada
ಸುದ್ದಿ

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು





ಕಂಬದಕೋಣೆ,ಕಾಲ್ತೊಡು : ದಿನಾಂಕ 23 ಆಗಸ್ಟ್ 2024 ರ ಶುಕ್ರವಾರ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ಕಾಲ್ತೋಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಡಾಕ್ ಸೇವಾ; ಜನ್ ಸೇವಾ-ಅಂಚೆ ಜನ ಸಂಪರ್ಕ ಅಭಿಯಾನವನ್ನು ಕಾಲ್ತೊಡು ಅಂಬೇಡ್ಕರ್‍-ಭವನದಲ್ಲಿ ಆಯೋಜಿಸಲಾಗಿತ್ತು. ಅಭಿಯಾನವನ್ನು ಜ್ಯೊತಿ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದ ಪಂಚಾಯತ್ ಅಧ್ಯಕ್ಷ ಅಣ್ಣಪ್ಫ ಶೆಟ್ಟಿ ಬಟ್ನಾಡಿ ಇಂತಹ ಕುಗ್ರಾಮದಲ್ಲೂ ಕೂಡ ಅಂಚೆ ಅಭಿಯಾನವನ್ನು ಆಯೋಜಿಸಿದಕ್ಕಾಗಿ ಅಂಚೆ ಇಲಾಖೆಯನ್ನು ಶ್ಲಾಘಿಸಿದರು. ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು. ಅಂಚೆ ಅಧೀಕ್ಷಕ ರಮೇಶ್ ಪ್ರಭು, ಮತ್ತೊರ್ವ ಸಹಾಯಕ ಅಂಚೆ ಅಧೀಕ್ಷಕರಾದ ದಯಾನಂದ ದೇವಾಡಿಗ, ಪಿ.ಡಿ.ಓ. ದಿವಾಕರ ಶಾನುಭೋಗ ಮತ್ತು ಹೇರೂರು ಪಂಚಾಯತ್ ಸದಸ್ಯ ಸೂಲಿಯಣ್ಣ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಆನಂದ್ ಬಿಲ್ಲವ ಕಾರ್ಯಕ್ರಮವನ್ನು ನಿರ್ವಹಿಸಿದರು. ನೂರಾರು ಗ್ರಾಮಸ್ತರು ಆಧಾರ್ ಹೊಸ ನೊಂದಣಿ/ಪರಿಷ್ಕರಣೆ ಹಾಗು ವಿವಿಧ ಅಂಚೆ ಸೌಲಭ್ಯಗಳ ಮಾಹಿತಿಯ ಪ್ರಯೋಜನವನ್ನು ಪಡೆದರು.



Related posts

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk