32 C
Mumbai
March 7, 2026
Mumbai News Kannada
ಮುಂಬಯಿ

ಮೊಗವೀರ ವ್ಯವಸ್ಥಾಪಕ ಮಂಡಳಿ, ಮೀರಾ – ಭಾಯಂದರ್ ಶಾಖೆಯ ಮಹಿಳಾ ವಿಭಾಗ, ಯುವ ವಿಭಾಗದ ಆಶ್ರಯದಲ್ಲಿ ಆಟಿಡೊಂಜಿ ಕೂಟ.





ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಮೀರಾ ಭಾಯಂದರ್ ಶಾಖೆಯ ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಆಯೋಜನೆಯಲ್ಲಿ ಆಟಿದ ಕೂಟ ಕಾರ್ಯಕ್ರಮ ಜುಲೈ 28ರಂದು ಮೀರಾ ರೋಡ್ ನ ಬ್ಲೂ ಮೂನ್ ಕ್ಲಬ್ಬಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು.
ಸಭಾ ಕಾರ್ಯಕ್ರಮವು ಸುರೇಶ್ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರೀತಿ ಶ್ರೀಯಾನ್, ದಯಾವತಿ ಸುವರ್ಣ, ಶಾಖೆಯ ಕಾರ್ಯಧ್ಯಕ್ಷರಾದ ಗಂಗಾಧರ್ ಬಂಗೇರ ಜೊತೆ ಕಾರ್ಯದರ್ಶಿ ತಿಲಕ್ ಸುವರ್ಣ, ಕೋಶಧಿಕಾರಿಯದ ರವಿ ಸುವರ್ಣ, ಶಾಖೆಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಭಾವತಿ ಅಮೀನ್, ದೊಂಬಿವಲಿ ಶಾಖೆಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದವಯಾಂತಿ ಕೋಟ್ಯಾನ್ , ಪ್ರಧಾನ ಕಚೇರಿಯ ಮಹಿಳಾ ವಿಭಾಗದ ಜೊತೆ ಕೋಶಾಧಿಕಾರಿ ಭಾರತಿ ಕರ್ಕೇರ ಹಾಗೂ ಯುವ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಪ್ರಮೋದ ಪುತ್ರನ್ ವೇದಿಕೆಯಲ್ಲಿ ಉಪಸ್ತರಿದ್ದರು.
ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ಎಚ್ ಅರುಣ್ ಕುಮಾರ್ ಮಾತನಾಡಿ ಮೀರಾ ಭಾಯಂದರ್ ಶಾಖೆಯ ಮಹಿಳಾ ವಿಭಾಗ ವಿವಿಧ ಕಾರ್ಯಕ್ರಮಗಳನ್ನು ನಡಿಸಿ ಪರಿಸರದ ಸಮಾಜ ಬಾಂಧವರನ್ನು ಒಗ್ಗಟ್ಟು ಮಾಡಿದೆ. ಮಂಡಳಿಯಲ್ಲಿ ಸಿಗುವ ಸೇವಾ ಸೌಲಭ್ಯಗಳನ್ನು ಶಾಖೆಯ ಸದಸ್ಯರು ಪಡೆದುಕೊಳ್ಳಬೇಕು ಎಂದು ನುಡಿದರು.

ಪ್ರೀತಿ ಶ್ರೀಯಾನ್, ದಯಾವತಿ ಸುವರ್ಣ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸುರೇಶ್ ಕುಂದರ್ ಗಂಗಾಧರ್ ಬಂಗೇರ ಪ್ರಭಾವತಿ ಅಮೀನ್ ಆಟಿ ತಿಂಗಳ ಬಗ್ಗೆ ಮತ್ತು ಶಾಖೆಯ ಬೆಳವಣಿಗೆ ಬಗ್ಗೆ ಮಾತುಗಳನ್ನಾಡಿದರು
ಪ್ರಭಾವತಿ ಅಮೀನ್,ನವೀನ್ ತಿಂಗಳಾಯ, ದೇವದಾಸ್ ಕರ್ಕೇರ ಅವರು ಆಟಿ ಕಳಂಜೆ ನೃತ್ಯ ರೂಪಕವನ್ನು ಮಾಡಿದರು. ಮಹಿಳಾ ವಿಭಾಗದ ಮತ್ತು ಯುವ ವಿಭಾಗದವರು ಜಾನಪದ ನೃತ್ಯ ರೂಪಕವನ್ನು ಮಾಡಿದರು. ಪ್ರಭಾವತಿ ಅಮೀನ್ ರವರು ಏಕಪಾತ್ರ ಅಭಿನಯವನ್ನು ಮಾಡಿ ರಂಜಿಸಿದರು.
ಅಮಿತಾ ಶ್ರೀಯಾನ್ ಆಟಿ ತಿಂಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಡಾಕ್ಟರ್ ಸ್ನೇಹ ರಾಜೀವ ಮತ್ತು ಭವಾನಿ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.
ಗೌರವವನ್ನು ಸ್ವೀಕರಿಸಿದಿಬ್ಬರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಮಹಿಳಾ ವಿಭಾಗದವರು ಮನೆಯಿಂದ ಮಾಡಿ ತರಲಾದ ವಿವಿಧ ರೀತಿಯ ರುಚಿಕರ ತಿಂಡಿ ತಿನಿಸುಗಳು ಸವಿಯನ್ನು ನೆರೆದವರಿಗೆ ನೀಡಿದರು.
ಕಾರ್ಯಕ್ರಮದಲ್ಲಿ ನೃತ್ಯವನ್ನು ಸಂಯೋಜಿಸಿದ ಮಾನ್ಸಿ ಪುತ್ರನ್ ಮತ್ತು ಆಶಿಕ ಕಾಂಚನ್ ಇವರನ್ನು ವೇದಿಕೆ ಗಣ್ಯರು ಗೌರವಿಸಿದರು.
ಕಾರ್ಯಕ್ರಮವನ್ನು ಅಮಿತ ಶ್ರೀಯಾನ್ ಮತ್ತು ಅಮೃತ ಸಾಲ್ಯಾನ್ ನಿರೂಪಿಸಿದರು. ಅಮಿತಾ ಶ್ರೀಯಾನ್., ಅಮೃತ ಸಾಲಿಯನ್ ಅತಿಥಿಗಳನ್ನು ಸ್ವಾಗತಿಸಿದರು.
ದೇವಕಿ ಕೋಟ್ಯಾನ್, ಕಲಾವತಿ ತಿಂಗಳಾಯ, ವೈಶಾಲಿ ಸಾಲಿಯನ್ ಅವರು ಪ್ರಾರ್ಥನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ದಿಲೀಪ್ ಮುಲ್ಕಿ, ಕೋಶಾಧಿಕಾರಿ ಪ್ರತಾಪ್ ಕರ್ಕೇರ, ಉಪಾಧ್ಯಕ್ಷ ಅರವಿಂದ ಕಾಂಚನ್, ಸದಸ್ಯರಾದ ಪ್ರತಾಪ್ ಸಾಲಿಯಾನ್, ಚಂದ್ರಶೇಖರ್ ಕರ್ಕೇರ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಾಜೇಶ್ವರಿ ಉಪ್ಪೂರ್, ಶಾಖೆಯ ಮಾಜಿ ಕಾರ್ಯಧ್ಯಕ್ಷ ಜಯಶೀಲ ತಿಂಗಳಾಯ ಹಾಗೂ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.



Related posts

ಭಾರತ್ ಬ್ಯಾಂಕ್ : ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 59ನೇ ನವರಾತ್ರಿ ಉತ್ಸವ ಸಂಪನ್ನ

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ದೇವಸ್ಥಾನ, ಡೊಂಬಿವಲಿಯ ನೂತನ ಅಧ್ಯಕ್ಷರಾಗಿ ಸೂರಜ್ ಡಿ. ಸಪಲಿಗ ಆಯ್ಕೆ 

Mumbai News Desk

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk