April 1, 2025
ಸುದ್ದಿ

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.


ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಸಂದೇಶಗಳು ಸರ್ವಮಾನ್ಯ ವಾಗಿರುವಂತದು. ಶಿಕ್ಷಣ ಮತ್ತು ಸಂಘಟನೆಯ ಮಹತ್ವವನ್ನು ನಮಗೆ ಬೋಧಿಸಿ, ಅನುಷ್ಠಾನ ಗೊಳಿಸುವ ಪಾತ್ರ ವಹಿಸಿದವರು.ಅದರೆ ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಪಡೆಯುವುದು ಮುಖ್ಯ ಮೂಡನಂಬಿಕೆ, ಅಜ್ಞಾನದಿಂದಾಗಿ ಸಮಾಜ ಹಿಂದುಳಿದಿದೆ.ಅದೇ ರೀತಿ ರಾಜ್ಯದಲ್ಲಿ ಬಸವಣ್ಣ ನವರ ಬಳಿಕ ಶೋಷಿತ ಹಿಂದುಳಿದ ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸುವ ಮಹತ್ವದ ಪಾತ್ರ ನಿರ್ವಹಿಸಿದವರು ಮಾಜಿ ಮುಖ್ಯಮಂತ್ರಿ ಗಳಾದ ದಿ.ಡಿ. ದೇವರಾಜ ಅರಸುರವರು ಎಂದು ವಿಧಾನ ಪರಿಷತ್ ನ ಸದಸ್ಯರಾದ ಬಿ.ಕೆ.ಹರಿಪುಸಾದ್ ರವರು ಹೇಳಿದರು.
ಅವರು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸುವರ್ಣ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ಕುದ್ರೋಳಿ, ನಾರಾಯಣ ಗುರು ಶಿಕ್ಷಣ ಸಂಸ್ಥೆ ಮತ್ತು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತ್ಯುತ್ಸವ ಮತ್ತು ದಿ.ಡಿ. ದೇವರಾಜ ಅರಸು ರವರ 109 ನೇ ಜನ್ಮಜಯಂತಿ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಸಭಾ ಅಧ್ಯಕ್ಷತೆಯನ್ನು ವಹಿಸಿದ ಯೂನಿಯನ್ ನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ರವರು ಮಾತನಾಡುತ್ತಾ ಬ್ರಹ್ಮಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಆಶಯದಂತೆ ಹಿಂದುಳಿದ ಸಮಾಜದ ವಿದ್ಯಾರ್ಥಿಗಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ದಾಮೋದರ ಆರ್.ಸುವರ್ಣ ರವರು ಸ್ಥಾಪಿಸಿರುವ ನಾರಾಯಣ ಗುರು ಶಿಕ್ಷಣ ಸಂಸ್ಥೆಯು ಯಾವುದೇ ಡೊನೇಷನ್ ಪಡೆಯದೆ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಸುಮಾರು ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವಿದ್ಯಾರ್ಜನೆ ಗೈಯುತ್ತಿದ್ದಾರೆ ಎಂದರು.
ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮಲತಾ ಎನ್.ಸುವರ್ಣ, ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೋಟು, ಕೋಶಾಧಿಕಾರಿ ಬಿ.ದೇರಣ್ಣ, ಒಕ್ಕೂಟದ ಕೋಶಾಧಿಕಾರಿ ಬಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸೌಮ್ಯ ಶೆಟ್ಟಿ ಸ್ವಾಗತಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ದಿನೇಶ್ ಬಂಗೇರ ವಂದಿಸಿದರು. ಪ್ರಾಧ್ಯಾಪಕ ರಾದ ಕೇಶವ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಮೊದಲು ವಿದ್ಯಾರ್ಥಿಗಳಿಂದ ಭಜನೆ ಬಳಿಕ ಗುರುಪೂಜೆ ನಡೆಯಿತು.

Related posts

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಜಾರ್ಜ್ ಫರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ ನಿಮಿತ್ತ ಪೂರ್ವಬಾವೀ ಸಭೆ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk