32 C
Mumbai
April 24, 2026
Mumbai News Kannada
ಪ್ರಕಟಣೆ

ಸೆ 1:.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ 170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ





ನಾಲಾಸೋಪಾರ ಅ30.ಬಿಲ್ಲವರ ಎಸೋಸಿಯೇಶನ್, ಮುಂಬಯಿ ನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯಲ್ಲಿ
170ನೇ ಬ್ರಹ್ಮಶ್ರೀ ನಾರಾಯಣ ಗುರುಜಯಂತಿ ಆಚರಣೆ ಸೆ 1ನೇ ರವಿವಾರ ರಿಜೆನ್ಸಿ ಬ್ಯಾಂಕ್ವೆಟ್ ಹಾಲ್, ಅಗ್ನಿಶಾಮಕ ದಳ ಕಾರ್ಯಾಲಯದ ಎದರುಗಡೆ, ಅಗರ್ ವಾಲ ಚೌಕ್, ವಸಾಯಿ-ನಾಲಾಸೋಪಾರ ಲಿಂಕ್ ರೋಡ್, ನಾಲಾಸೋಪಾರ (ಪೂರ್ವ) ಇಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.

ಕಾರ್ಯಕ್ರಮವನ್ನು. ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ,

ಬೆಳಿಗ್ಗೆ 8.00 ರಿಂದ 9.00ರ ವರೆಗೆ ಜಪಯಜ್ಞ ಪ್ರಾರಂಭ “ಓಂ ನಮೋ ನಾರಾಯಣಾಯ ನಮಃ ಶಿವಾಯ”
ಬೆಳಿಗ್ಗೆ 9.00 ರಿಂದ 12.00ರ ವರೆಗೆ : ಭಜನೆ ಮಧ್ಯಾಹ್ನ 12.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ .ಅಂದಿನ ಪೂಜಾ ವಿಧಿವಿಧಾನಗಳನ್ನು ಪುರೋಹಿತ ಹರೀಶ್ ಭಟ್ ರವರು ನೆರವೇರಿಸಲಿರುವರು.
ಈ‌ ಕಾರ್ಯಕ್ರಮದಲ್ಲಿ ಗುರುಭಕ್ತರು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಅಸೋಸಿಯೇಷನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲ್ಯಾನ್ ಗೌರವಕೋಶಧಿಕಾರಿ ರಾಜೇಶ್ ಜೆ. ಬಂಗೇರ . – ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ ಕೋಟ್ಯಾನ್. ಮತ್ತಿತರ ಪದಾಧಿಕಾರಿಗಳು ಹಾಗೂನಾಲಾಸೋಪಾರ – ವಿರಾರ್ ಸ್ಥಳೀಯ ಕಚೇರಿಯ ಪರವಾಗಿ, ಗೌರವ ಕಾರ್ಯ ಧ್ಯಕ್ಷ ಶ್ರೀಧರ್ ಪೂಜಾರಿ . ಕಾರ್ಯಾಧ್ಯಕ್ಷ ಗಣೇಶ್ ವಿ ಸುವರ್ಣ. ಗೌರವ ಕಾರ್ಯದರ್ಶಿ ಉಮೇಶ್ ಕೆ. ಕೊಟ್ಯಾನ್ .
ಗೌರವ ಕೋಶ ಧಿಕಾರಿ ನಳಿನಿ ಎಸ್, ಪೂಜಾರಿ. ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ನವೆಂಬರ್ 26 ರಂದು ಚಿಣ್ಣರ ಬಿಂಬ  ಮುಂಬಯಿ ವತಿಯಿಂದ ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ  ಪ್ರತಿಭಾ ಸ್ಪರ್ಧೆ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk