September 6, 2026
Mumbai News Kannada
ಪ್ರಕಟಣೆ

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ





ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಆಶ್ರಯದಲ್ಲಿ 94 ನೇ ವರ್ಷದ ಗಣೇಶೋತ್ಸವವು ಸೆ. 7 ರಂದು ನಾನಾಚೌಕ್ ಸಮೀಪದಲ್ಲಿರುವ ಗಾಂವ್ದೇವಿಯ ಜೆ. ಕೆ. ಟವರ್ ಆವರಣದಲ್ಲಿ ಜರಗಲಿದೆ. ಅಂದು ಬೆಳಿಗ್ಗೆ ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ವಿಘ್ನೇಶ್ವರನ ಆಗಮನವಾಗಲಿದ್ದು ತದನಂತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ
ಸಂಜೆ ಗಂಟೆ 7 ಕ್ಕೆ ಸರಿಯಾಗಿ ಗ್ರಾಮದೇವಿಯ ಸನ್ನಿಧಾನದಲ್ಲಿ ಪೂಜೆ ನಡೆಯಲಿದ್ದು ಬಳಿಕ ಸರ್ವಾಲಂಕೃತನಾದ ಶ್ರೀ ವಿಘ್ನೇಶ್ವರನಿಗೆ ಮಹಾಪೂಜೆ ನೆರವೇರಲಿದೆ ಯಕ್ಷ ಪ್ರಿಯ ಬಳಗ ಮೀರಾ-ಭಾಯಂದರ್ ಇವರ ಹಿಮ್ಮೇಳದೊಂದಿಗೆ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿಯವರ ನೇತೃತ್ವದಲ್ಲಿ ವೇದಮೂರ್ತಿ ನವೀನ ಭಟ್ ಚೆಂಬೂರು ಪೂಜಾ ಕೈಂಕರ್ಯವನ್ನು ನಿರ್ವಹಿಸಲಿದ್ದು ಬಳಿಕ ನೆರೆದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗುವುದೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ಆ ಪ್ರಯುಕ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವಿಘ್ನೇಶ್ವರನ ಕೃಪೆಗೆ ಪಾತ್ರರಾಗುವುದಲ್ಲದೆ ಕಳೆದ 94 ವರ್ಷಗಳಿಂದ ನಿರಂತರವಾಗಿ ನಡೆಯುವ ಈ ಗಣೇಶೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ವಿನಂತಿಸಿದ್ದಾರೆ

.

.

.



Related posts

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕಾಮೋಟೆ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ  ಜ 3 ರಂದು 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ವಸಾಯಿ ಘಟಕದ ವತಿಯಿಂದ ಸೆ. 28ಕ್ಕೆ ಶಾರದಾ ಪೂಜೆ

Mumbai News Desk

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

Mumbai News Desk

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ಪಡುತೋನ್ಸೆ, ಹೂಡೆ : ಎ. 18,19ರಂದು ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk