July 23, 2026
Mumbai News Kannada
ಪ್ರಕಟಣೆ

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ಸೆ. 7 ರಂದು 94 ನೇ ವರ್ಷದ ಗಣೇಶೋತ್ಸವ ಆಚರಣೆ







ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಆಶ್ರಯದಲ್ಲಿ 94 ನೇ ವರ್ಷದ ಗಣೇಶೋತ್ಸವವು ಸೆ. 7 ರಂದು ನಾನಾಚೌಕ್ ಸಮೀಪದಲ್ಲಿರುವ ಗಾಂವ್ದೇವಿಯ ಜೆ. ಕೆ. ಟವರ್ ಆವರಣದಲ್ಲಿ ಜರಗಲಿದೆ. ಅಂದು ಬೆಳಿಗ್ಗೆ ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ವಿಘ್ನೇಶ್ವರನ ಆಗಮನವಾಗಲಿದ್ದು ತದನಂತರ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ
ಸಂಜೆ ಗಂಟೆ 7 ಕ್ಕೆ ಸರಿಯಾಗಿ ಗ್ರಾಮದೇವಿಯ ಸನ್ನಿಧಾನದಲ್ಲಿ ಪೂಜೆ ನಡೆಯಲಿದ್ದು ಬಳಿಕ ಸರ್ವಾಲಂಕೃತನಾದ ಶ್ರೀ ವಿಘ್ನೇಶ್ವರನಿಗೆ ಮಹಾಪೂಜೆ ನೆರವೇರಲಿದೆ ಯಕ್ಷ ಪ್ರಿಯ ಬಳಗ ಮೀರಾ-ಭಾಯಂದರ್ ಇವರ ಹಿಮ್ಮೇಳದೊಂದಿಗೆ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿಯವರ ನೇತೃತ್ವದಲ್ಲಿ ವೇದಮೂರ್ತಿ ನವೀನ ಭಟ್ ಚೆಂಬೂರು ಪೂಜಾ ಕೈಂಕರ್ಯವನ್ನು ನಿರ್ವಹಿಸಲಿದ್ದು ಬಳಿಕ ನೆರೆದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗುವುದೆಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
ಆ ಪ್ರಯುಕ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವಿಘ್ನೇಶ್ವರನ ಕೃಪೆಗೆ ಪಾತ್ರರಾಗುವುದಲ್ಲದೆ ಕಳೆದ 94 ವರ್ಷಗಳಿಂದ ನಿರಂತರವಾಗಿ ನಡೆಯುವ ಈ ಗಣೇಶೋತ್ಸವವನ್ನು ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾದ ಮಹಾದೇವ ಪೂಜಾರಿ ವಿನಂತಿಸಿದ್ದಾರೆ

.

.

.



Related posts

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಪಾಂಗಾಳ: ಮಾ. 2ರಿಂದ 4ರವರೆಗೆ ಸಿರಿ ಕುಮಾರ ಬ್ರಹ್ಮಲಿಂಗೇಶ್ವರ ಆದಿ ಆಲಡೆ ಆಯನ ಸಿರಿಜಾತ್ರೆ

Mumbai News Desk

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) : ಫೆ. 8ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಜು.10 : ಹರಿಶ್ಚಂದ್ರ ಪಿ ಸಾಲ್ಯಾನ್ ರವರ 24 ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ.

Mumbai News Desk