32 C
Mumbai
March 7, 2026
Mumbai News Kannada
ಪ್ರಕಟಣೆ

ಸೆ.7,8 ರಂದು ಕುಲಾಲ ಸಂಘ ಮುಂಬಯಿ ವತಿಯಿಂದ ಥಾಣೆ ಪಶ್ಚಿಮ ಗೋಡ್ ಬಂದರ್ ನ ಸಂಘದ ನಿವೇಶನದಲ್ಲಿ ಗಣೇಶೋತ್ಸವ ಸಂಭ್ರಮ,





ಕುಲಾಲ ಸಂಘ ಮುಂಬಯಿ ಇದರ ವತಿಯಿಂದ ಗಣೇಶೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೆ.7 ಮತ್ತು 8 ರಂದು ನಡೆಯಲಿದೆ.
ದಾಣೆ ಪಶ್ಚಿಮ ಗೋಡ್ ಬಂದರು, ಹೋಟೇಲು ಕೋರ್ಟ್ ಯಾರ್ಡ್ ಸಮೀಪ, ಶುಭಂ ಹೌಸಿಂಗ್ ಕಾಂಪ್ಲೆಕ್ಸ್ ಇದರ ಮುಂದುಗಡೆ, ಕಸರವಾಡವಲಿ ಇಲ್ಲಿರುವ ಕುಲಾಲ ಸಂಘದ ನಿವೇಷನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಎರಡು ದಿನಗಳ ಗಣೇಶೋತ್ಸವವು ಸಂಭ್ರಮದಿಂದ ನಡೆಯಲಿದೆ.

ಸೆ.7 ರಂದು ಬೆಳಿಗ್ಗೆ 10 ಗಂಟೆಗೆ ಗಣಹೋಮ ಮತ್ತು ಮತ್ತು ಪ್ರಾಣ ಪ್ರತಿಷ್ಠ ಪೂಜಾ, ಮಧ್ಯಾಹ್ನ 3ರಿಂದ ಭಜನಾ ಸಂಕೀರ್ತನ, ಸಂಜೆ 4 ಕ್ಕೆ ಸಂಘದ ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಂಜೆ 6ಕ್ಕೆ ಮಹಾಮಂಗಳಾರತಿ, ರಾತ್ರಿ 8 ರಿಂದ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ.

ಸೆ. 8 ರಂದು ಬೆಳಿಗ್ಗೆ 8 ಕ್ಕೆ ಆರತಿ, ಮಧ್ಯಾಹ್ನ 2ರಿಂದ ಮಹಾ ಆರತಿ ಮತ್ತು ವಿಸರ್ಜನೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಆಗಮಿಸಿ ಸಹಕರಿಸಬೇಕಾಗಿ ಕುಲಾಲ ಸಂಘಯ ಅಧ್ಯಕ್ಷರಾದ ರಘು ಎ ಮೂಲ್ಯ, ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಧ್ಯಕ್ಷ ಡಿ ಐ ಮೂಲ್ಯ ಪ್ರಧಾನ ಕಾರ್ಯದರ್ಶಿ ಕರುಣಾಕ‌ರ್ ಸಾಲಿಯಾನ್, ಕೋಶಾಧಿಕಾರಿ ಜಯ ಎಸ್ ಅಂಚನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಮಮತಾ ಎಸ್ ಗುಜರಾನ್ ಹಾಗೂ ಕಾರ್ಯಕಾರಿ ಸಮಿತಿ, ಗುರು ವಂದನ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ವಿನಂತಿಸಿದ್ದಾರೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಜುಲೈ.20ಕ್ಕೆ ಆಟಿಡೊಂಜಿ ದಿನ

Mumbai News Desk

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk