July 23, 2026
Mumbai News Kannada
ಪ್ರಕಟಣೆ

ಸೆ.7,8 ರಂದು ಕುಲಾಲ ಸಂಘ ಮುಂಬಯಿ ವತಿಯಿಂದ ಥಾಣೆ ಪಶ್ಚಿಮ ಗೋಡ್ ಬಂದರ್ ನ ಸಂಘದ ನಿವೇಶನದಲ್ಲಿ ಗಣೇಶೋತ್ಸವ ಸಂಭ್ರಮ,







ಕುಲಾಲ ಸಂಘ ಮುಂಬಯಿ ಇದರ ವತಿಯಿಂದ ಗಣೇಶೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೆ.7 ಮತ್ತು 8 ರಂದು ನಡೆಯಲಿದೆ.
ದಾಣೆ ಪಶ್ಚಿಮ ಗೋಡ್ ಬಂದರು, ಹೋಟೇಲು ಕೋರ್ಟ್ ಯಾರ್ಡ್ ಸಮೀಪ, ಶುಭಂ ಹೌಸಿಂಗ್ ಕಾಂಪ್ಲೆಕ್ಸ್ ಇದರ ಮುಂದುಗಡೆ, ಕಸರವಾಡವಲಿ ಇಲ್ಲಿರುವ ಕುಲಾಲ ಸಂಘದ ನಿವೇಷನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಎರಡು ದಿನಗಳ ಗಣೇಶೋತ್ಸವವು ಸಂಭ್ರಮದಿಂದ ನಡೆಯಲಿದೆ.

ಸೆ.7 ರಂದು ಬೆಳಿಗ್ಗೆ 10 ಗಂಟೆಗೆ ಗಣಹೋಮ ಮತ್ತು ಮತ್ತು ಪ್ರಾಣ ಪ್ರತಿಷ್ಠ ಪೂಜಾ, ಮಧ್ಯಾಹ್ನ 3ರಿಂದ ಭಜನಾ ಸಂಕೀರ್ತನ, ಸಂಜೆ 4 ಕ್ಕೆ ಸಂಘದ ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಂಜೆ 6ಕ್ಕೆ ಮಹಾಮಂಗಳಾರತಿ, ರಾತ್ರಿ 8 ರಿಂದ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ.

ಸೆ. 8 ರಂದು ಬೆಳಿಗ್ಗೆ 8 ಕ್ಕೆ ಆರತಿ, ಮಧ್ಯಾಹ್ನ 2ರಿಂದ ಮಹಾ ಆರತಿ ಮತ್ತು ವಿಸರ್ಜನೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹಾಗೂ ಭಕ್ತಾಭಿಮಾನಿಗಳು ಆಗಮಿಸಿ ಸಹಕರಿಸಬೇಕಾಗಿ ಕುಲಾಲ ಸಂಘಯ ಅಧ್ಯಕ್ಷರಾದ ರಘು ಎ ಮೂಲ್ಯ, ಗೌರವ ಅಧ್ಯಕ್ಷ ದೇವದಾಸ್ ಕುಲಾಲ್, ಉಪಧ್ಯಕ್ಷ ಡಿ ಐ ಮೂಲ್ಯ ಪ್ರಧಾನ ಕಾರ್ಯದರ್ಶಿ ಕರುಣಾಕ‌ರ್ ಸಾಲಿಯಾನ್, ಕೋಶಾಧಿಕಾರಿ ಜಯ ಎಸ್ ಅಂಚನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಮಮತಾ ಎಸ್ ಗುಜರಾನ್ ಹಾಗೂ ಕಾರ್ಯಕಾರಿ ಸಮಿತಿ, ಗುರು ವಂದನ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ವಿನಂತಿಸಿದ್ದಾರೆ.



Related posts

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk

ನವೆಂಬರ್ 28 ರಿಂದ ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಅಖಿಲ ಭಾರತೀಯ ವೈದ್ಯರ ಕ್ರಿಕೆಟ್ ಟೂರ್ನಮೆಂಟ್ ಆರಂಭ

Mumbai News Desk

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk