September 6, 2026
Mumbai News Kannada
ಪ್ರಕಟಣೆ

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.





 

ಮೀರಾ ರೋಡ್ ನ ಭಾರತಿ ಪಾರ್ಕ್ ಬಳಿ ಯುನಿಟ್ ಟವರ್ , ಶ್ರೀ ಲಕ್ಷ್ಮೀನಾರಾಯಣ ಭಜನ ಮಂದಿರದ ಸಮೀಪದಲ್ಲಿ ನಡೆಯುತ್ತಿದ್ದ ಮೀರಾ ರೋಡ್ ಯುವ ಮಿತ್ರ ಮಂಡಳಿ ಇದರ 28 ನೇ ವಾರ್ಷಿಕ ಸಾರ್ವಜನಿಕ ಗಣೇಶೋತ್ಸವವು ಸೆ. 7 ರಿಂದ 17 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಸೆಪ್ಟೆಂಬರ್ 7ರಂದು ಬೆಳಿಗ್ಗೆ ಗಣ ಹೋಮ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.


ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಜೆ ಭಜನೆ ಮಹಾಮಂಗಳಾರತಿ ನಡೆಯಲಿದೆ.
13ರಂದು ಸಂಜೆ 4:00 ಗೆ ಶ್ರೀ ಸತ್ಯನಾರಾಯಣ ಮಹಾಪೂಜೆ, ಬಳಿಕ ಹಳದಿ ಕುಂಕುಮ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 14ರಂದು ರಾತ್ರಿ 9:00ಗೆ ಸಾಂಸ್ಕೃತಿಕ ಕಾರ್ಯಕ್ರಮ.
ಸೆಪ್ಟಂಬರ್ 15ರಂದು ಸಂಜೆ ಭಜನೆ ರಾತ್ರಿ 8 ಗಂಟೆಗೆ ರಂಗ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ಸಪ್ಟಂಬರ್ 17ರಂದು ಶೋಭಾಯಾತ್ರೆಯಲ್ಲಿ ಜಲಸ್ತಂಭನಗೊಳಿಸುವ ಮೂಲಕ ಸಂಪನ್ನ ಗೊಳ್ಳಲಿದೆ.


ಭಗವದ್ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ
ಅಧ್ಯಕ್ಷ ಜಿತೇಂದ್ರ ಸನಿಲ್, ಉಪಾಧ್ಯಕ್ಷ ಹರೀಶ್ ರೈ , ಗೌ.ಕಾರ್ಯದರ್ಶಿ ಪಂಜದ ಗುತ್ತು ಸಂಪತ್ ಶೆಟ್ಟಿ , ಕೋಶಾಧಿಕಾರಿ ವಿಜಯ ಸುವರ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಉಡುಪ, ಮಹಿಳಾ ಸದಸ್ಯೆಯರ ಮತ್ತು ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk