32 C
Mumbai
March 7, 2026
Mumbai News Kannada
ಸುದ್ದಿ

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.





ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್

ಡಹಾಣೂ : ತಾ.09.09.2024. ಕಳೆದ ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಡಹಾಣೂವಿನ ಪ್ರತಿಷ್ಟಿತ ರಾಜಾಪುರ ಸಾರಸ್ವತ ಸಮಾಜ ಸೇವಾ ಮಂಡಳದ 26ನೆಯ ವರ್ಷದ ಮಂಗಲಮೂರ್ತಿ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ವಿಜೃಂಭಣೆಯಿಂದ ಜರಗಿ ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳನ್ನು  ವೈದಿಕ ಶ್ರೀ ವಸಂತ್ ಭಟ್ ಜರಗಿಸಿದರು.  ಸಂಪೂರ್ಣ ವ್ಯವಸ್ಥಾಪನೆಯಲ್ಲಿ ಯುವವೃಂದದ ಸದಸ್ಯರು ಸಹಕರಿಸಿದರು.

          ಪ್ಲಾಸ್ಟಿಕ್ ಮುಕ್ತ ಆಚರಣೆಗೆ ಮಹತ್ವ ನೀಡಿದ  ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಂಗಳೂರು ಮಲ್ಲಿಗೆಯೂ ಸೇರಿದಂತೆ ವೈವಿಧ್ಯಮಯ ಹೂಗಳ ಅಲಂಕಾರ ಮತ್ತು ಮಂಗಲಮೂರ್ತಿಯ ಶೋಭಾಯಾತ್ರೆಯಲ್ಲಿ ಗೋಮಾಂತಕದ ಮೂಲ ಮಠದ ಮಾದರಿಯಲ್ಲಿನ ವಿಶೇಷ ಪಲ್ಲಕ್ಕಿಯು ರಾಜಬೀದಿಯ ಇಕ್ಕೆಲಗಳಲ್ಲಿ ಜಮಾಯಿಸಿದ ನಗರವಾಸಿಗಳ  ಗಮನ ಸೆಳೆಯಿತು. 

            ಸ್ಥಳೀಯ ಭಕ್ತಾದಿಗಳು ಮತ್ತು  ವಿವಿಧ  ಸಂಸ್ಥೆಗಳ ಪದಾಧಿಕಾರಿಗಳೂ   ಸೇರಿದಂತೆ ತುಳುವ ಕನ್ನಡಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಶೋಭಾಯಾತ್ರೆಯ ಬಳಿಕ ಡಹಾಣೂ ಉತ್ತರದಲ್ಲಿನ ಕಂಕ್ರಾಡಿ ನದಿಯಲ್ಲಿ ಶ್ರೀಗಣೇಶ ಮೂರ್ತಿಯ ಜಲಸ್ಥಂಭನ ಕಾರ್ಯಕ್ರಮ ಜರಗಿತು.

 ಡಹಾಣೂ ವಲಯದ ಜಾಹೀರಾತಿಗಾಗಿ ಸಂಪರ್ಕಿಸಿ : ಪಿ.ಆರ್.ರವಿಶಂಕರ್ 8483980035



Related posts

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk