32 C
Mumbai
March 7, 2026
Mumbai News Kannada
ತುಳುನಾಡು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ







ಕಿನ್ನಿಗೋಳಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಭಕ್ತಿ ಸಂಭ್ರಮದೊಂದಿಗೆ ನಡೆಯಿತು.
50ನೇ ವರ್ಷದ ಸಂಭ್ರಮಾಚರಣೆಯ ಧಾರ್ಮಿಕ ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಹಾಗೂ ಮುಂಡ್ಕೂರಿನ ಶ್ರೀ ರಾಮದಾಸ್ ಉಪಾಧ್ಯಯರು ಆಶೀರ್ವಚನ ನೀಡಿದರು. ಶ್ರೀ ಗುರುರಾಜ್ ಆಚಾರ್ಯ ಪಡುಬಿದ್ರಿ, ಶ್ರೀ ಹರಿಭಟ್ ಮುಂಡ್ಕೂರು, ಆಶೀರ್ವಚನದ ಮಾತುಗಳನ್ನಾಡಿದರು.

ಅತಿಥಿಯಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಗೌರವಾಧ್ಯಕ್ಷ ಭುವನಾಭಿರಾಮ ಉಡುಪ, ಅಧ್ಯಕ್ಷ ಕುಶಲ ಪೂಜಾರಿ, ಶರತ್ ಶೆಟ್ಟಿ, ಧನಂಜಯ ಶೆಟ್ಟಿಗಾರ್ ದುಬೈ, ಅರುಣ್ ಉಳ್ಳಾಲ, ಸುಚರಿತ ಶೆಟ್ಟಿ, ಧನಪಾಲ ಶೆಟ್ಟಿ, ರಮೇಶ್ ಕುಮಾರ್ ಸೌಂದರ್ಯ, ದಿವಾಕರ್ ಕರ್ಕೇರ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಕ್ತರಿಂದ ಸುಮಾರು 11 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ದೇವರಿಗೆ ಅರ್ಪಿಸಲಾಯಿತು. ಹಾಗೂ ಗುರುರಾಜ್ ಆಚಾರ್ಯ ಪಡುಬಿದ್ರೆ ಇವರನ್ನು ಮತ್ತು ಸೌಂದರ್ಯ ರಮೇಶ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

.

.



Related posts

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk