September 6, 2026
Mumbai News Kannada
ತುಳುನಾಡು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ







ಕಿನ್ನಿಗೋಳಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಭಕ್ತಿ ಸಂಭ್ರಮದೊಂದಿಗೆ ನಡೆಯಿತು.
50ನೇ ವರ್ಷದ ಸಂಭ್ರಮಾಚರಣೆಯ ಧಾರ್ಮಿಕ ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಹಾಗೂ ಮುಂಡ್ಕೂರಿನ ಶ್ರೀ ರಾಮದಾಸ್ ಉಪಾಧ್ಯಯರು ಆಶೀರ್ವಚನ ನೀಡಿದರು. ಶ್ರೀ ಗುರುರಾಜ್ ಆಚಾರ್ಯ ಪಡುಬಿದ್ರಿ, ಶ್ರೀ ಹರಿಭಟ್ ಮುಂಡ್ಕೂರು, ಆಶೀರ್ವಚನದ ಮಾತುಗಳನ್ನಾಡಿದರು.

ಅತಿಥಿಯಾಗಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಗೌರವಾಧ್ಯಕ್ಷ ಭುವನಾಭಿರಾಮ ಉಡುಪ, ಅಧ್ಯಕ್ಷ ಕುಶಲ ಪೂಜಾರಿ, ಶರತ್ ಶೆಟ್ಟಿ, ಧನಂಜಯ ಶೆಟ್ಟಿಗಾರ್ ದುಬೈ, ಅರುಣ್ ಉಳ್ಳಾಲ, ಸುಚರಿತ ಶೆಟ್ಟಿ, ಧನಪಾಲ ಶೆಟ್ಟಿ, ರಮೇಶ್ ಕುಮಾರ್ ಸೌಂದರ್ಯ, ದಿವಾಕರ್ ಕರ್ಕೇರ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಕ್ತರಿಂದ ಸುಮಾರು 11 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ದೇವರಿಗೆ ಅರ್ಪಿಸಲಾಯಿತು. ಹಾಗೂ ಗುರುರಾಜ್ ಆಚಾರ್ಯ ಪಡುಬಿದ್ರೆ ಇವರನ್ನು ಮತ್ತು ಸೌಂದರ್ಯ ರಮೇಶ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

.

.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ಮೂಲ್ಕಿ : ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್(ರಿ)ಇದರ ಅಧ್ಯಕ್ಷರಾಗಿ ವಾಸು ಎಸ್. ಪೂಜಾರಿ ಕೊಲಕಾಡಿ ಆಯ್ಕೆ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಸಂಸ್ಕೃತಿಯ ಬೇರು, ಕೃಷಿಯ ಚಿಗುರು: ಉಡುಪಿಯಲ್ಲಿ ಕೃಷಿಯತ್ತ ಯುವಜನರನ್ನು ಆಕರ್ಷಿಸಲು ನಡೆದ ‘ಕೆಸರುದ ಗಮ್ಮತ್ತು’ , ಕೃಷಿ ಕ್ರೀಡಾಕೂಟ ಯಶಸ್ವಿ ಸಂಪನ್ನ

Mumbai News Desk