32 C
Mumbai
April 24, 2026
Mumbai News Kannada
ಕ್ರೀಡೆ

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ವಾರ್ಷಿಕ ಮಹಾಸಭೆ : ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿ – ಲವ ಕರ್ಕೇರ.






ಕಾಪು ಪರಿಸರದ ಜನಪ್ರಿಯ ಆರ್ಥಿಕ ಸಂಸ್ಥೆ ಅಕ್ಷಯಧಾರ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 2023 – 24ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 14ರಂದು ಕಾಪು ಭಾಸ್ಕರ ಸೌಧದಲ್ಲಿ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ಲವ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಜರಗಿತು.


ನಿರ್ದೇಶಕ ಶಿವರಾಮ್ ಆಚಾರ್ಯ ಶೇರುದಾರರನ್ನು, ಠೇವಣಿದಾರರನ್ನು, ಗ್ರಾಹಕರನ್ನು ಸ್ವಾಗತಿಸಿದರು.
ಅಕ್ಷಯಧಾರದ ಕಾರ್ಯದರ್ಶಿ ಅಮಿತಾ ದೇವಾಡಿಗ ವಾರ್ಷಿಕ ವರದಿಯನ್ನು ಮಂಡಿಸಿದರು. ಸೊಸೈಟಿಯ ನಿರ್ದೇಶಕ ಜಗಧೀಶ್ ಮೆಂಡನ್ ಗತ ವರ್ಷದ ಆಯ ವ್ಯಯ ಪಟ್ಟಿಯನ್ನು ಸಭೆಯ ಮುಂದಿಟ್ಟರು.
ಸೊಸೈಟಿಯ ಷೇರುದಾರರಾದ ಉಮನಾಥ ಬಂಗೇರ, ಶೀಲ ರಾಜ್ ಪುತ್ರನ್ ಪೊಲಿಪು, ಸೀತಾರಾಮ್ ಸಾಲಿಯನ್, ಸುಂದರ್ ಸುವರ್ಣ ಪೊಲಿಪು ಹಾಗೂ ಸೀತಾಲಕ್ಷ್ಮಿ ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ – ಸೂಚನೆ ನೀಡಿದರು.
ಈ ಸಂಧರ್ಭ ಸೊಸೈಟಿಯ ಆರಂಭದ ದಿನದಿಂದಲೂ ಶೇರುದಾರರಾದ ಹಾಗೂ ಸಂಸ್ಥೆಯ ಮಾರ್ಗದರ್ಶನರಾಗಿದ್ದ, ಈ ಬಾರಿ ಕಾಪು ಪುರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹರಿಣಾಕ್ಷಿ ದೇವಾಡಿಗ ಅವರನ್ನು ಸೊಸೈಟಿಯ ಪರವಾಗಿ ಸನ್ಮಾನಿಸಲಾಯಿತು. ನಿರ್ದೇಶಕ ಪ್ರಧೀಪ್ ಕುಮಾರ್ ಉಳಿಯರಗೋಳಿ ಸನ್ಮಾನಿತರನ್ನು ಪರಿಚಯಿಸಿದರು.
ಅಧ್ಯಕ್ಷತೆ ವಹಿಸಿದ್ದ ಲವ ಕರ್ಕೇರ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ” ನಮ್ಮ ಆರ್ಥಿಕ ಸಂಸ್ಥೆ ಮಧ್ಯಮ ವರ್ಗದ, ಸಣ್ಣ ಉದ್ದಿಮೆದಾರರ ಅಗತ್ಯತೆಗಳಿಗೆ ಸ್ಪಂದಿಸಿ, ಅವರ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುತ್ತಿದೆ. ಸೊಸೈಟಿಯು ಗ್ರಾಹಕರಿಗೆ ಗುಣಮಟ್ಟದ ಸೇವೆ – ಸೌಲಭ್ಯ ನೀಡುತ್ತಿದ್ದು, ನಮ್ಮ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿ ಎನ್ನುತ್ತಾ, ಶೇರುದಾರರಿಗೆ ,ಠೇವಣೆಧಾರರಿಗೆ ಹಾಗೂ ವಿವಿಧ ಖಾತೆಗಳನ್ನು ತೆರೆದು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದ ಎಲ್ಲಾ ಗ್ರಾಹಕರಿಗೂ ಅಭಿನಂದನೆ ಸಲ್ಲಿಸಿದರು.
ಅಮಿತಾ ದೇವದಾಸ್ ಸಭೆಯನ್ನು ಮುನ್ನಡೆಸಿ ಕೊನೆಗೆ ಧನ್ಯವಾದ ಸಮರ್ಪಿಸಿದರು.
ಸೊಸೈಟಿಯ ಉಪಾಧ್ಯಕ್ಷರು, ಎಲ್ಲಾ ನಿರ್ದೇಶಕರು, ಸಿಬ್ಬಂದಿಗಳು,ಶೇರುದಾರರು, ಗ್ರಾಹಕರು, ಠೇವಣಿದಾರರು ಉಪಸ್ಥಿತರಿದ್ದರು.

.

.

.



Related posts

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ಕಾಂದಿವಲಿ ಪಶ್ಚಿಮದ ರಂಜಿತ್ ಪೂಜಾರಿಗೆ ವಿಶ್ವ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Mumbai News Desk

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

Mumbai News Desk

ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ –ಉದಯ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಾರತ ತಂಡ

Mumbai News Desk

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk