32 C
Mumbai
April 23, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್ ಸಾರ್ವಜನಿಕ ಗಣೇಶೋತ್ಸವ ಮಂಡಲದ 100 ನೆಯ ವರ್ಷದ ಸಂಭ್ರಮಾಚರಣೆ.





ಚಿತ್ರ ಮತ್ತು ವರದಿ : ಪಿ.ಆರ್.ರವಿಶಂಕರ್

ಬೊಯಿಸರ್ : ಒಂದು ಕಾಲದಲ್ಲಿ ತೀರಾ ಕಾಡುಪ್ರದೇಶವಾಗಿದ್ದು ಒಂದು ಸಣ್ಣ ಹಳ್ಳಿ ಪ್ರದೇಶವಾಗಿದ್ದ ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿ  ಕೆಲವು ಆಸಕ್ತರು ಸ್ಥಾಪಿಸಿ ಪೂಜಿಸಿಕೊಂಡು ಬಂದಿದ್ದ   ರೈಲ್ವೇ ಸ್ಟೇಷನ್ ಬಳಿಯ” ಸಾರ್ವಜನಿಕ ಗಣೇಶೋತ್ಸವ ಮಂಡಳಿ”ಯು ಈಗ  ತನ್ನ 100 ನೆಯ ವರ್ಷದ ಆಚರಣೆಯ ಸಂಭ್ರಮದಲ್ಲಿದೆ. ಗಣೇಶೋತ್ಸವವನ್ನು ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.

ವಿಘ್ನಹರ್ತಾ ಗಣಪತಿಯ ವಿಶೇಷ ಪೂಜೆಯು ನಿನ್ನೆ ಸಂಜೆ ಜರಗಿತು. 

     ಈ ಸಂದರ್ಭದಲ್ಲಿ ಭಾಗವಹಿಸಿದ  ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಷನ್  ಅಧ್ಯಕ್ಷರಾದ ರಘುರಾಮ್ ಎಮ್. ರೈ ,    ಮೀರಾ ಡಹಾಣೂ ಬಂಟ್ಸ್ ನ ಟ್ರಸ್ಟೀ  ಕೆ . ಭುಜಂಗ ಶೆಟ್ಟಿ ,   ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥರಾದ  ಶ್ರೀನಿವಾಸ್ ಕೋಟ್ಯಾನ್ ಮತ್ತು ಸತ್ಯಾ ಕೋಟ್ಯಾನ್ ,  ಉದ್ಯಮಿ ಬಿಕ್ರಿಗುತ್ತು ಧನೇಶ್ ಶೆಟ್ಟಿ ,     ಗಣೇಶೋತ್ಸವದ ಪದಾಧಿಕಾರಿಗಳಾದ ಶೇಕರ್ ಮಹಾಂತ್ ಹಾಗೂ ವಿಜಯ್ ಪಾಠಕ್ ಇನ್ನಿತರರನ್ನು ಚಿತ್ರದಲ್ಲಿ ಕಾಣಬಹುದು.

      ಛತ್ರಪತಿ ಶಿವಾಜಿ ಮಹಾರಾಜರ ಜೀವನದ ವೀರ ಕಥನವನ್ನು ದೃಶ್ಯಾವಳಿಯ ಮೂಲಕ ಹನ್ನೊಂದು ದಿನಗಳೂ ಭಕ್ತಾದಿಗಳ ವೀಕ್ಷಣೆಗೆ ಪ್ರದರ್ಶಿಸಲಾಗುತ್ತಿದೆ.

ವರದಿ : ಪಿ.ಆರ್.ರವಿಶಂಕರ್, ಡಹಾಣೂರೋಡ್

              8483980035



Related posts

ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್, 21 ನೇ ವಾರ್ಷಿಕೋತ್ಸವ, ಕರ್ನಾಟಕ ರಾಜ್ಯೋತ್ಸವ ಅಚರಣೆ

Mumbai News Desk

ಮಹಾರಾಷ್ಟ್ರದಲ್ಲಿ ಎನ್‌ಸಿಎಂಸಿ (NCMC) ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಸೌಲಭ್ಯ

Mumbai News Desk

ಮಹಾರಾಷ್ಟ್ರ : ನಗರ ಸಂಸ್ಥೆಗಳ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಮಹಾಯುತಿ

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk

ಮಹಾರಾಷ್ಟ್ರ ಮಂಡಳಿಯ ಎಚ್ಎಸ್ ಸಿ(HSC), ಎಸ್ ಎಸ್ ಸಿ (SSC),2026ರ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆ

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk