July 23, 2026
Mumbai News Kannada
ಸುದ್ದಿ

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.








ಮಹಾರಾಷ್ಟ್ರ ಸರ್ಕಾರವು ಅಧಿಕೃತ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 16ರ (ಸೋಮವಾರ )ಬದಲಿಗೆ ಸೆಪ್ಟೆಂಬರ್ 18ಕ್ಕೆ(ಬುಧವಾರ )ಮರು ನಿಗದಿಪಡಿಸಿದೆ. ಗಣೇಶ್ ಹಬ್ಬದ ಕೊನೆಯ ದಿನವಾದ ಅನಂತ ಚತುರ್ದಶಿ ಸೆಪ್ಟೆಂಬರ್ 17ರಂದು ಇರುವುದರಿಂದ ಸ್ಥಳೀಯ ಮುಸ್ಲಿಂ ಸಮುದಾಯವು ತನ್ನ ಈದ್ ಮೆರವಣಿಗೆಯನ್ನು ಸೆಪ್ಟಂಬರ್ 16ರ ಬದಲಿಗೆ ಸೆಪ್ಟೆಂಬರ್ 18ರಂದು ನಡೆಸಲು ನಿರ್ಧರಿಸಿದೆ.
ಗಣೇಶ ವಿಸರ್ಜನಾ ಸಮಾರಂಭಗಳೊಂದಿಗೆ ಘರ್ಷಣೆಯನ್ನು ತಪ್ಪಿಸಲು ಸೆಪ್ಟಂಬರ್ 18ರಂದು ಈದ್ ಮೆರವಣಿಗೆಯನ್ನು ನಡೆಸಲು ಯೋಜಿಸಿದ ಮುಸ್ಲಿಂ ಶಾಸಕರು ಮತ್ತು ಸಂಘಟನೆಗಳ ಮನವಿಯನ್ನು ಅನುಸರಿಸಿ ಸರಕಾರ ಈ ನಿರ್ದಾರ ತೆಗೆದುಗೊಂಡಿದೆ.
ಮಹಾರಾಷ್ಟ್ರ ಸರ್ಕಾರವು ಸೂಚಿಸಿದ 24 ಸಾರ್ವಜನಿಕ ರಜಾ ದಿನಗಳಲ್ಲಿ ಈದ್ ಮಿಲಾದ್ ರಜೆಯನ್ನು ಸೋಮವಾರ ಸೆಪ್ಟೆಂಬರ್ 16ರ 2024 ರಂದು ಸೂಚಿಸಲಾಗಿತ್ತು. 2024ರ ಸೆಪ್ಟೆಂಬರ್ 17ರಂದು ಹಿಂದುಗಳ ಹಬ್ಬವಾದ ಅನಂತ ಚತುರ್ದಶಿ ಇರುವುದರಿಂದ ಎರಡು ಸಮುದಾಯಗಳ ನಡುವೆ ಶಾಂತಿ ಮತ್ತು ಸಾಮಾಜಿಕ ಸೌಹಾರ್ದತೆ ಕಾಪಾಡಲು ಮುಸ್ಲಿಂ ಸಮುದಾಯದ ವತಿಯಿಂದ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಈದ್ ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 16ರ ಬದಲಿಗೆ , ಸೆಪ್ಟೆಂಬರ್ 18ರ ಬುಧವಾರದಂದು ಘೋಷಿಸಲಾಗಿದೆ.

.

.



Related posts

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಇಂದಿನ ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk