30.9 C
Mumbai
June 8, 2026
Mumbai News Kannada
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಸೆ. 29 ರಂದು 36ನೇ ವಾರ್ಷಿಕ ಮಹಾಸಭೆ





ಮುಂಬೈ.ಸೆ. 16: ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಸರ್ವ ಸದಸ್ಯರ 36 ನೇ ವರ್ಷದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 29 ರವಿವಾರದಂದು ಪೂರ್ವಾಹ್ನ ಗಂಟೆ 10-30 ಕ್ಕೆ ಸರಿಯಾಗಿ ಉತ್ಕರ್ಷ ಮಂಡಲ್ ಸಭಾಗೃಹ ಪ್ರಥಮ ಮಹಡಿ ಸಹಯೋಗ ಮಂದಿರ, ಸಹಯೋಗ ಮಂದಿರ ಮಾರ್ಗ, ನೌಪಾಡಾ, ಥಾಣೆ (ಪಶ್ಚಿಮ) ಇಲ್ಲಿ ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಅಂದು ಗತ ಮಹಾಸಭೆಯ ವರದಿ ವಾಚನ ಮತ್ತು ಅಂಗೀಕಾರ ಹಾಗೂ ಆಡಳಿತ ಮಂಡಳಿ ಒಪ್ಪಿಸುವ 2023 – 24ರ ಅವಧಿಯ ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧಕರಿಂದ ಪರಿಶೀಲಿಸಲ್ಪಟ್ಟ ಲೆಕ್ಕ ಪತ್ರಗಳ ಅಂಗೀಕರಿಸುವುದಲ್ಲದೆ ನೂತನ ಲೆಕ್ಕ ಪರಿಶೋಧಕರುಗಳ ನೇಮಕ, 2024 – 26ನೇ ಸಾಲಿನ ಆಡಳಿತ ಮಂಡಳಿಗೆ 16 ಸದಸ್ಯರ ಆಯ್ಕೆ, ಫೋರ್ಟ್ ನಲ್ಲಿ ಇರುವ ಕಾರ್ಯಾಲಯವನ್ನು ದುರಸ್ಥಿ ಅಥವಾ ಮಾರಾಟ ಮಾಡುವ ಕುರಿತು ಹಾಗೂ ಸದಸ್ಯರ ಸಲಹೆ ಸೂಚನೆ ಸಭಾಧ್ಯಕ್ಷರ ಭಾಷಣ ಸೇರಿದಂತೆ ಮಹಾಸಭೆಯ ಕಾರ್ಯಕಲಾಪಗಳು ಜರಗಲಿವೆ ಎಂದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ತಿಳಿಸಿದ್ದಾರೆ.
ಮುಂಬಯಿ ಮಹಾನಗರ ಮತ್ತು ಉಪನಗರಗಳ ಶಾಲಾ-ಕಾಲೇಜುಗಳಲ್ಲಿ ಅಥವಾ ಯಾವುದೇ ವಿಶ್ವ ವಿದ್ಯಾಲಯಗಳಲ್ಲಿ 2023 – 24 ನೇ ಶೈಕ್ಷಣಿಕ ವರ್ಷಾಂತಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪರಸ್ಕಾರ ಮತ್ತು ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವ ನಿಟ್ಟಿನಲ್ಲಿ ಅರ್ಜಿ ಅಹ್ವಾನಿಸಲಾಗಿದ್ದು ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳು ಪ್ರತಿಭಾ ಪರಸ್ಕಾರ ಮತ್ತು ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29 ಅಂತಿಮ ದಿನವಾಗಿರುತ್ತದೆ. ಈ ಕುರಿತು ವಿವರವಾದ ಮಾಹಿತಿ ಒಳಗೊಂಡ ಸಂಘದ ವಾರ್ಷಿಕ ವರದಿಯನ್ನು ಸದಸ್ಯರಿಗೆ ಈಗಾಗಲೇ ಅಂಚೆಯ ಮುಖಾಂತರ ಕಳುಹಿಸಲಾಗಿದ್ದು ವರದಿಯ ಪ್ರತಿ ಸಿಗದೆ ಇರುವ ಸದಸ್ಯರು ಮತ್ತು ವಿಳಾಸ ಬದಲಾಯಿಸಿದ ಸದಸ್ಯರು ಸಂಘದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದೆಂದು ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಮತ್ತು ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ತಿಳಿಸಿದ್ದಾರೆ.
ಸದಸ್ಯರೆಲ್ಲರೂ ಸಕಾಲದಲ್ಲಿ ಆಗಮಿಸಿ ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡುವುದರೊಂದಿಗೆ ಮಹಾಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ, ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಉಪಾಧ್ಯಕ್ಷರುಗಳಾದ ನರಸಿಂಹ ಎಂ. ಬಿಲ್ಲವ, ಆನಂದ ಕೆ. ಪೂಜಾರಿ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಸುಶೀಲಾ ಆರ್. ಪೂಜಾರಿ, ಹರೀಶ ಎನ್. ಪೂಜಾರಿ, ಜೊತೆ ಕೋಶಾಧಿಕಾರಿಗಳಾದ ರಮೇಶ ಜಿ. ಬಿಲ್ಲವ, ರತ್ನಾಕರ ಎಸ್. ಪೂಜಾರಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಅಥವಾ ಸದಸ್ಯರನ್ನು (9869071413/9867811733/9820718785)ಸಂಪರ್ಕಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

.

.

.



Related posts

ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿ ಕಾಂದಿವಲಿ ಪೂರ್ವ : ನ. 15ರಂದು, 51ನೇ ವಾರ್ಷಿಕ ಶ್ರೀ ಶನೇಶ್ವರ ಗ್ರಂಥ ಪಾರಾಯಣ ಮಹೋತ್ಸವ ಮತ್ತು ಭಂಡಾರ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ,ಫೆ. 15ರಂದು, 26ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಮಹಾಪೂಜೆ

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk