July 23, 2026
Mumbai News Kannada
ಸುದ್ದಿ

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ








ಜನರಿಗೆ ಒದಗಿಸುವ ಸೇವೆಗಳನ್ನು ಸುಧಾರಿಸಲು ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಚಿಂತನೆ ನಡೆಸಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಸೋಮವಾರ ರಾತ್ರಿ ಪುಣೆ – ಹುಬ್ಬಳ್ಳಿ ನಡುವಿನ ಒಂದೇ ಭಾರತ್ ರೈಲನ್ನು ಸ್ವಾಗತಿಸಲು ಇಲ್ಲಿನ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸೋಮಣ್ಣ ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರತನಕವಿದ್ದು, ಕರ್ನಾಟಕ ರಾಜ್ಯ ಒಂದರಲ್ಲಿ ಒಟ್ಟು 742 ಕಿ. ಮೀ ಜಾಗ ಆವರಿಸಿದೆ. ಪ್ರಯಾಣಿಕರಿಗೆ ಹೆಚ್ಚು ಮತ್ತು ಉತ್ತಮ ಸೇವೆಗಳ ಅಗತ್ಯವಿದೆ ಹೀಗಾಗಿ ಭಾರತೀಯ ರೈಲ್ವೆಯೊಂದಿಗೆ ವಿಲೀನವನ್ನು ಪರಿಗಣಿಸಲಾಗುತ್ತಿದೆ ಎಂದು ಸೋಮಣ್ಣ ಒತ್ತಿ ಹೇಳಿದರು.ನಾವು ಕರ್ನಾಟಕ ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ, ಮಹಾರಾಷ್ಟ್ರಕ್ಕೆ ಮನವರಿಕೆ ಮಾಡಿದ ನಂತರ ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.
ಕೊಂಕಣ ರೈಲ್ವೆ 1993ರಲ್ಲಿ ಮುಂಬೈಯಿಂದ ಮಂಗಳೂರಿಗೆ ರೈಲ್ವೆ ಸೇವೆ ಆರಂಭಿಸಿದ್ದರೂ, ಇಷ್ಟರ ತನಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ವಿಫಲವಾಗಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಉತ್ತಮ ಸೇವೆ, ಸೌಲಭ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಿಗಬಹುದು.

.

.

.



Related posts

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವಂತೆ ಎಚ್ಚರವಹಿಸಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಕರೆ

Mumbai News Desk

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk