30.9 C
Mumbai
June 8, 2026
Mumbai News Kannada
ಮುಂಬಯಿ

ಹೊಸ ಆಂಗಣ ಪತ್ರಿಕೆಯ ವತಿಯಿಂದ ತಿಂಗಳ ಬೆಳಕು ಕಾರ್ಯಕ್ರಮ, ಸನ್ಮಾನ.





ಮುಲ್ಕಿ. ಸೆ. 24: ಪ್ರಾಮಾಣಿಕ ಹಾಗೂ ಕಾರ್ಯದಕ್ಷತೆಯಿಂದ ಸಮಾಜ ಸೇವೆ ಮಾಡುತ್ತಿರುವ ಅದರಲ್ಲೂ ಬಡ ಮಕ್ಕಳ ವಿದ್ಯಾರ್ಚನೆಗೆ ಸಹಾಯಹಸ್ತ ನೀಡುತ್ತಿರುವ ಸಮಾಜ ಹಿತಚಿಂತಕನನ್ನು ಆರಿಸಿ ಸನ್ಮಾನಿಸಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ. ಹೊಸ ಆಂಗಣ ಪತ್ರಿಕೆಯು ನೂರ್ಕಾಲ ಬಾಳಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾದ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.
ಅವರೆ ಸೆ. 24ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಹೊಸ ಆಂಗಣ ಮಾಸಿಕ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಪತ್ರಿಕೆಯ 110ನೇ ಇಯತ್ತೆಯ ಬಿಡುಗಡೆ ಹಾಗೂ ಸಾಧಕರ ಗೌರವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಅತಿಥಿಯಾಗಿ ಆಗಮಿಸಿದ್ದ ಮುಂಬಯಿ ಪತ್ರಕರ್ತ ಉಮೇಶ್. ಕೆ. ಅಂಚನ್ ಮಾತನಾಡಿ ಗ್ರಾಮೀಣ ವಲಯದಲ್ಲಿ ಸ್ವಾರ್ಥರಹಿತವಾಗಿ ಸಮಾಜ ಸೇವೆ ಮಾಡುವ ವ್ಯಕ್ತಿಗಳನ್ನು ಗುರುತಿಸಿ ತಿಂಗಳಿಗೊಬ್ಬರಂತೆ ಸನ್ಮಾನಿಸುವ ಕಾರ್ಯ ಅಭಿನಂದನೀಯ. ಇದೊಂದು ಉತ್ತಮ ಕಾರ್ಯಕ್ರಮದ ಮಾದರಿಯಾಗಿದೆ ಎಂದರು.
ಮುಲ್ಕಿ ನಗರ ಪಂಚಾಯತ್ ಅದ್ಯಕ್ಷ ಸತೀಶ್ ಎಸ್. ಅಂಚನ್ ರವರು ಹೊಸ ಆಂಗಣ ಪತ್ರಿಕೆಯ ಸರ್ವ ಕಾರ್ಯಕಲಾಪಗಳಿಗೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ಸಮಾಜಸೇವಕ ಹಬೀಬುಲ್ಲ ದಂಪತಿಗಳನ್ನು ಸನ್ಮಾನಿಸಲಾಯಿತು ಹಾಗೂ ಅಮೇರಿಕಾ ಪ್ರವಾಸಗೖಯಲಿರುವ ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ.ಸಾಲ್ಯಾನ್ ಅವರನ್ನು ಗೌರವಿಸಲಾಯಿತು.


ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ವಿಜಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ .ಫ್ರೊ. ಸ್ಯಾಮ್ ಮಾಬೆನ್ ಅಭಿನಂಧನಾ ಮಾತುಗಳನ್ನಾಡಿದರು. ದಿನೇಶ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮವನ್ನು ರವಿಚಂದ್ರರವರು ನಿರೂಪಿಸಿದರು.
ಮುಲ್ಕಿ ಬಿಲ್ಲವ ಸಂಘದ ಅದ್ಯಕ್ಷ ಪ್ರಕಾಶ್ ಸುವರ್ಣ, ಮುಲ್ಕಿ ಅತಿಕಾರಿಬೆಟ್ಟು ಗ್ರಾಮ ಪಂ. ಉಪಾದ್ಯಕ್ಷ ಮನೋಹರ್ ಕೋಟ್ಯಾನ್ , ಉದಯ ಕುಮಾರ್ ಕುಬೆವೂರು, ಜಾನ್ ಕ್ಟಾಡ್ರಸ್, ವಾಸು ಪೂಜಾರಿ ಚಿತ್ರಾಪು, ಬಂಕಿ ನಾಯಕ್, ರಮೇಶ್ ಅಮೀನ್ ಕೊಕ್ಕರಕಲ್, ರವಿಚಂದ್ರ ರಾವ್ ರವಿ ಅಂಚನ್, ಸೇಸಪ್ಪ ದೇವಾಡಿಗ ಮತ್ತಿತರರು ಉಪಸ್ತಿತರಿದ್ದರು.

.

.



Related posts

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk

ಕುಲಾಲ ಸಂಘ ಮುಂಬಯಿ ಇದರ ವಿದ್ಯಾರ್ಥಿ ವೇತನ ವಿತರಣೆ

Mumbai News Desk

ತೀಯಾ ಸಮಾಜ ಮುಂಬಯಿ, ಸತ್ಯನಾರಾಯಣ ಪೂಜೆ, ಅರಸಿನ ಕುಂಕುಮ, ಬೋಳ್ನಾಡು ಕ್ಷೇತ್ರದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ಬೈಂಗನ್ ವಾಡಿ, ಗೋವಂಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರ;ವಿಜೃಂಭಣೆಯ 45 ನೇ ವಾರ್ಷಿಕೋತ್ಸವ: ಕಲ್ಕುಡ -ಕಲ್ಲುರ್ಟಿ- ಗುಳಿಗ ದೈವಗಳ ಕೋಲ

Mumbai News Desk