April 2, 2025
ಪ್ರಕಟಣೆ

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

ಡೊಂಬಿವಲಿ – ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 2 ನೇ ತಾರೀಕು ಬುಧವಾರ ಬೆಳಿಗ್ಗೆ 9 ರಿಂದ ಮದ್ಯಾಹ್ನ 2 ಗಂಟೆಯ ತನಕ ಶಿಬಿರ ನಡೆಯಲಿದೆ. ಡೊಂಬಿವಲಿಯ ಪ್ರಸಿದ್ದ ವೈದ್ಯರಾದ ಡಾಕ್ಟರ್ ಅನಘಾ ಹೇರೂರ್ ಅವರ ತಂಡದಿಂದ ಉಚಿತ ನೇತ್ರ ತಪಾಸಣೆ ನಡೆಯಲಿದೆ. ನೇತ್ರ ಪರೀಕ್ಷೆ ಮಾಡಿಸುವವರು ಬೆಳಿಗ್ಗೆ 9 ಗಂಟೆಯಿಂದ ಶಿಬಿರ ದಲ್ಲಿ ಟೋಕನ್ ಪಡೆದುಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಮತ್ತು ಡಾಕ್ಟರ್ ಅನಿಲ್ ಹೇರೂರ್ ತಂಡದವರಿಂದ ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆಯು ನಡೆಯಲಿದೆ. ಮೊದಲು ಬರುವ 30 ರಿಂದ 35 ಮಹಿಳೆಯರಿಗೆ ಕ್ಯಾನ್ಸರ್ ತಪಾಸಣೆಗೆ ಅವಕಾಶವಿದೆ. ಸಮಾಜ ಬಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ರಾಜು ಮೊಗವೀರ ತಗ್ಗರ್ಸೆ, ಕಾರ್ಯದರ್ಶಿ ಶ್ರೀಯುತ ಸಂತೋಷ ಪುತ್ರನ್ ಮತ್ತು ಸಮಿತಿ ಸದಸ್ಯರು ಹಾಗೂ ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷರಾದ ಶ್ರೀಯುತ ಶೇಖರ್ ಮೆಂಡನ್, ಕಾರ್ಯದರ್ಶಿ ಶ್ರೀಯುತ ಉಮೇಶ್ ಮೆಂಡನ್ ಮತ್ತು ಶಾಖೆಯ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಸ್ಥಳ – ಮೊಗವೀರ ವ್ಯವಸ್ತಾಪಕ ಮಂಡಳಿ. ವೇದ ಬ್ರಹ್ಮ,
2 ನೇ ಮಳಿಗೆ, M.G ರೋಡ್, ಲಿಜತ್ ಪಾಪಡ್ ಮೇಲುಗಡೆ,
ಡೊಂಬಿವಲಿ ಪಶ್ಚಿಮ.

Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

ಕಾಮೋಟೆ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ  ಜ 3 ರಂದು 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆ

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk

ಮೇ 26ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರ ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮುತ್ತುಟ್ ಫೈನಾನ್ಸ್ ಲಿಮಿಟೆಡ್ ನ ಜಂಟಿ ಆಶ್ರಯದಲ್ಲಿ ಅ. 10ಕ್ಕೆ ಸ್ಥನ್ಯ ಪಾನ ಸಪ್ತಾಹ

Mumbai News Desk