32 C
Mumbai
March 7, 2026
Mumbai News Kannada
ಸುದ್ದಿ

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.





ಸುದ್ದಿ : ಪಿ.ಆರ್.ರವಿಶಂಕರ್

   ಡಹಾಣೂ : 25.09.2024 ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ತಾಲೂಕು ಕೇಂದ್ರವಾದ  ಡಹಾಣೂವಿನಲ್ಲಿಯ ಹೋಟೆಲ್ ಉದ್ಯಮಿ ( ಹೋಟೆಲ್ ಸರೋವರ್) ಹಾಗೂ ಸಮಾಜಸೇವಕರೂ ಆಗಿರುವ  ಅಶೋಕ್ ಎಸ್.ಶೆಟ್ಟಿ ಉಳೆಪಾಡಿ ಇವರನ್ನು ಇತ್ತೀಚೆಗೆ ಡಹಾಣೂ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಮಾನನೀಯ ಶ್ರೀ ಕಾಮ್ರೇಡ್  ವಿನೋದ್ ಭಿವಾ ನಿಕೋಲೆ ಇವರು ಸ್ವಗೃಹದಲ್ಲಿ ಸಮ್ಮಾನಿಸಿ ಅಭಿನಂದಿಸಿದರು. 

” ಮಾನ್ಯ ಅಶೋಕ್ ಶೆಟ್ಟಿಯವರು ಹೋಟೆಲ್ ಉದ್ಯಮದ ವ್ಯಸ್ತ ಜೀವನದ ನಡುವೆಯೂ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕೈಗೊಳ್ಳುವ ತೆರೆಯ ಮರೆಯಲ್ಲಿನ ಸಮಾಜಮುಖೀ ಸೇವೆಯನ್ನು ನಾವು ಗಮನಿಸುತ್ತಾ ಬಂದಿರುತ್ತೇವೆ. ತುರ್ತು ವೈದ್ಯಕೀಯ ಸಹಾಯದ ಅಗತ್ಯವಿದ್ದಾಗ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ಅಶೋಕ್ ಶೆಟ್ಟಿಯವರ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ನಾವು ಆಚರಿಸಿದ್ದ ಜಾಗತಿಕ ಆದಿವಾಸಿ ದಿನದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ  ನಮ್ಮಿಂದ ಆಮಂತ್ರಿಸಲ್ಪಟ್ಟು , ಅನಿವಾರ್ಯ ಕಾರಣಗಳಿಂದ ಆ  ಕಾರ್ಯಕ್ರಮದಲ್ಲಿ ಅವರ ಅನುಪಸ್ಥಿತಿಯ ಸಂದರ್ಭದಲ್ಲಿ ಅವರನ್ನು ಸ್ವಗೃಹದಲ್ಲಿ ಅಭಿನಂದಿಸಲು ಸಂತೋಷ ಪಡುತ್ತೇವೆ. ಇವರ ಸಮಾಜ ಸೇವೆ ಮುಂದೆಯೂ ನಿರಂತರವಾಗಲಿ ” ಎಂದು ಹಾರೈಸಿದರು. 

       ಮಾನ್ಯ ಶಾಸಕರು  ಅಶೋಕ್ ಶೆಟ್ಟಿಯವರನ್ನು ಶಾಲು ಹೊದೆಸಿ  ಫಲವಸ್ತು ಹಾಗೂ ಸ್ಮರಣಿಕೆಗಳನ್ನು ಇತ್ತು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸರಿತಾ ಅಶೋಕ್ ಶೆಟ್ಟಿ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಚಿತ್ರ ಹಾಗೂ ಸುದ್ಧಿ :

ಪಿ.ಆರ್.ರವಿಶಂಕರ್ 

8483980035



Related posts

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk