32 C
Mumbai
March 7, 2026
Mumbai News Kannada
ಸುದ್ದಿ

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ






ಚಿತ್ರ, ವರದಿ : ಧನಂಜಯ್ ಪೂಜಾರಿ

ಮುಂಬಯಿ : ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 80ನೇ ವರ್ಷಾಚರಣೆಯ ಅಂಗವಾಗಿ ಶ್ರೀ ಶನಿಶಿಂಗ್ನಪುರ ಕ್ಷೇತ್ರದಲ್ಲಿ ದಿನಾಂಕ 28 / 9 / 2024 ರಂದು ಶ್ರೀ ಶನಿ ಗ್ರಂಥ ಪಾರಾಯಣ ಪೂಜೆಯು ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಂದು ಬೆಳಗ್ಗೆ ವಿವಿಧ ಪೂಜಾ ಸಮಿತಿಗಳ, ಭಕ್ತರ ಕೂಡುಕೆಯಿಂದ ಭಜನಾ ಕಾರ್ಯಕ್ರಮ, ಭಕ್ತಿ ಭಜನೆ, ಮಧ್ಯಾಹ್ನ ಸತೀಶ್ ಕೋಟ್ಯಾನ್ ರವರಿಂದ ಕಳಸ ಪ್ರತಿಷ್ಠಾಪನೆ ನಡೆದು ನಂತರ ಶನಿ ಗ್ರಂಥ ಪಾರಾಯಣ ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಜರುಗಿತು. ಸಂಜೆ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ಜರುಗಿತು.

ಅರ್ಚಕರಾಗಿ ಹರೀಶ್ ಶಾಂತಿ ಸಂತೋಷ ಶಾಂತಿ ಮತ್ತು ಸುರೇಶ್ ಪೂಜಾರಿ ಸಹಕರಿಸಿದರು, ಮಧ್ಯಾಹ್ನ ಮತ್ತು ಸಂಜೆ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಅಧ್ಯಕ್ಷರಾದ ರವಿ ಎಲ್ ಬಂಗೇರ, ಧಾರ್ಮಿಕ ಸಲಹೆಗಾರರಾದ ಜೆ ಜೆ ಕೋಟ್ಯಾನ್, ಸಹಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸಾದ್ ಕರ್ಕೇರ, ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದವರು ಹಾಗೂ ಶನಿ ಶಿಗ್ನಾಪುರ ಮಂದಿರದ ಆಡಳಿತ ಸಮಿತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.



Related posts

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಡಾ| ಆರ್ ಕೆ ಶೆಟ್ಟಿಯವರಿಗೆ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ

Mumbai News Desk

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk