30.5 C
Mumbai
June 8, 2026
Mumbai News Kannada
ಸುದ್ದಿ

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ






ಚಿತ್ರ, ವರದಿ : ಧನಂಜಯ್ ಪೂಜಾರಿ

ಮುಂಬಯಿ : ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 80ನೇ ವರ್ಷಾಚರಣೆಯ ಅಂಗವಾಗಿ ಶ್ರೀ ಶನಿಶಿಂಗ್ನಪುರ ಕ್ಷೇತ್ರದಲ್ಲಿ ದಿನಾಂಕ 28 / 9 / 2024 ರಂದು ಶ್ರೀ ಶನಿ ಗ್ರಂಥ ಪಾರಾಯಣ ಪೂಜೆಯು ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಂದು ಬೆಳಗ್ಗೆ ವಿವಿಧ ಪೂಜಾ ಸಮಿತಿಗಳ, ಭಕ್ತರ ಕೂಡುಕೆಯಿಂದ ಭಜನಾ ಕಾರ್ಯಕ್ರಮ, ಭಕ್ತಿ ಭಜನೆ, ಮಧ್ಯಾಹ್ನ ಸತೀಶ್ ಕೋಟ್ಯಾನ್ ರವರಿಂದ ಕಳಸ ಪ್ರತಿಷ್ಠಾಪನೆ ನಡೆದು ನಂತರ ಶನಿ ಗ್ರಂಥ ಪಾರಾಯಣ ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಜರುಗಿತು. ಸಂಜೆ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ಜರುಗಿತು.

ಅರ್ಚಕರಾಗಿ ಹರೀಶ್ ಶಾಂತಿ ಸಂತೋಷ ಶಾಂತಿ ಮತ್ತು ಸುರೇಶ್ ಪೂಜಾರಿ ಸಹಕರಿಸಿದರು, ಮಧ್ಯಾಹ್ನ ಮತ್ತು ಸಂಜೆ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಅಧ್ಯಕ್ಷರಾದ ರವಿ ಎಲ್ ಬಂಗೇರ, ಧಾರ್ಮಿಕ ಸಲಹೆಗಾರರಾದ ಜೆ ಜೆ ಕೋಟ್ಯಾನ್, ಸಹಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸಾದ್ ಕರ್ಕೇರ, ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದವರು ಹಾಗೂ ಶನಿ ಶಿಗ್ನಾಪುರ ಮಂದಿರದ ಆಡಳಿತ ಸಮಿತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.



Related posts

  ಬಿಲ್ಲವ ಸಮಾಜದ  ಜನನಾಯಕ  ಜಯ ಸಿ. ಸುವರ್ಣ ಸಂಸ್ಮರಣೆ

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk

ಕೊಂಕಣ ರೈಲ್ವೆ ವಿಲೀನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ: ಕರಾವಳಿ ಅಭಿವೃದ್ಧಿಗೆ ಲೋಕಸಭೆಯಲ್ಲಿ ಬಲವಾದ ಮಂಡನೆ

Mumbai News Desk