September 6, 2026
Mumbai News Kannada
ಸುದ್ದಿ

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ






ಚಿತ್ರ, ವರದಿ : ಧನಂಜಯ್ ಪೂಜಾರಿ

ಮುಂಬಯಿ : ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 80ನೇ ವರ್ಷಾಚರಣೆಯ ಅಂಗವಾಗಿ ಶ್ರೀ ಶನಿಶಿಂಗ್ನಪುರ ಕ್ಷೇತ್ರದಲ್ಲಿ ದಿನಾಂಕ 28 / 9 / 2024 ರಂದು ಶ್ರೀ ಶನಿ ಗ್ರಂಥ ಪಾರಾಯಣ ಪೂಜೆಯು ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಂದು ಬೆಳಗ್ಗೆ ವಿವಿಧ ಪೂಜಾ ಸಮಿತಿಗಳ, ಭಕ್ತರ ಕೂಡುಕೆಯಿಂದ ಭಜನಾ ಕಾರ್ಯಕ್ರಮ, ಭಕ್ತಿ ಭಜನೆ, ಮಧ್ಯಾಹ್ನ ಸತೀಶ್ ಕೋಟ್ಯಾನ್ ರವರಿಂದ ಕಳಸ ಪ್ರತಿಷ್ಠಾಪನೆ ನಡೆದು ನಂತರ ಶನಿ ಗ್ರಂಥ ಪಾರಾಯಣ ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಜರುಗಿತು. ಸಂಜೆ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ಜರುಗಿತು.

ಅರ್ಚಕರಾಗಿ ಹರೀಶ್ ಶಾಂತಿ ಸಂತೋಷ ಶಾಂತಿ ಮತ್ತು ಸುರೇಶ್ ಪೂಜಾರಿ ಸಹಕರಿಸಿದರು, ಮಧ್ಯಾಹ್ನ ಮತ್ತು ಸಂಜೆ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಅಧ್ಯಕ್ಷರಾದ ರವಿ ಎಲ್ ಬಂಗೇರ, ಧಾರ್ಮಿಕ ಸಲಹೆಗಾರರಾದ ಜೆ ಜೆ ಕೋಟ್ಯಾನ್, ಸಹಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸಾದ್ ಕರ್ಕೇರ, ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದವರು ಹಾಗೂ ಶನಿ ಶಿಗ್ನಾಪುರ ಮಂದಿರದ ಆಡಳಿತ ಸಮಿತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (15/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಭಟ್ಕಳದಲ್ಲಿ ಮಹಾ ದುರಂತ: ನದಿಯಲ್ಲಿ ಮಲವಿ ಹೆಕ್ಕಲು ಹೋದ ಎಂಟು ಮಹಿಳೆಯರು ನೀರು ಪಾಲು

Mumbai News Desk

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk