July 23, 2026
Mumbai News Kannada
ಸುದ್ದಿ

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ








ಚಿತ್ರ, ವರದಿ : ಧನಂಜಯ್ ಪೂಜಾರಿ

ಮುಂಬಯಿ : ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ 80ನೇ ವರ್ಷಾಚರಣೆಯ ಅಂಗವಾಗಿ ಶ್ರೀ ಶನಿಶಿಂಗ್ನಪುರ ಕ್ಷೇತ್ರದಲ್ಲಿ ದಿನಾಂಕ 28 / 9 / 2024 ರಂದು ಶ್ರೀ ಶನಿ ಗ್ರಂಥ ಪಾರಾಯಣ ಪೂಜೆಯು ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಂದು ಬೆಳಗ್ಗೆ ವಿವಿಧ ಪೂಜಾ ಸಮಿತಿಗಳ, ಭಕ್ತರ ಕೂಡುಕೆಯಿಂದ ಭಜನಾ ಕಾರ್ಯಕ್ರಮ, ಭಕ್ತಿ ಭಜನೆ, ಮಧ್ಯಾಹ್ನ ಸತೀಶ್ ಕೋಟ್ಯಾನ್ ರವರಿಂದ ಕಳಸ ಪ್ರತಿಷ್ಠಾಪನೆ ನಡೆದು ನಂತರ ಶನಿ ಗ್ರಂಥ ಪಾರಾಯಣ ಹಿಂದಿ ಹಾಗೂ ಮರಾಠಿ ಭಾಷೆಯಲ್ಲಿ ಜರುಗಿತು. ಸಂಜೆ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಣೆ ಜರುಗಿತು.

ಅರ್ಚಕರಾಗಿ ಹರೀಶ್ ಶಾಂತಿ ಸಂತೋಷ ಶಾಂತಿ ಮತ್ತು ಸುರೇಶ್ ಪೂಜಾರಿ ಸಹಕರಿಸಿದರು, ಮಧ್ಯಾಹ್ನ ಮತ್ತು ಸಂಜೆ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ಅಧ್ಯಕ್ಷರಾದ ರವಿ ಎಲ್ ಬಂಗೇರ, ಧಾರ್ಮಿಕ ಸಲಹೆಗಾರರಾದ ಜೆ ಜೆ ಕೋಟ್ಯಾನ್, ಸಹಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸಾದ್ ಕರ್ಕೇರ, ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದವರು ಹಾಗೂ ಶನಿ ಶಿಗ್ನಾಪುರ ಮಂದಿರದ ಆಡಳಿತ ಸಮಿತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk

ಮಂಗಳೂರು ಕುಲಾಲ ಭವನದ ಉದ್ಘಾಟನೆಯ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸುಧಾರಕ ಸಂಘ ಪುಣೆ ಸದಸ್ಯರಿಗೆ ಆಹ್ವಾನ

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk