July 23, 2026
Mumbai News Kannada
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು







ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್​ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ಗೆ ಮುಖಭಂಗವಾಗಿದೆ. ಲೋಕಾಸಭಾ ಚುನಾವಣೆಯಲ್ಲೂ ಸಹ ಟಿಕೆಟ್​ ಮಿಸ್ ಆಗಿತ್ತು, ಇದೀಗ ವಿಧಾನಪರಿಷತ್ ಉಚಪಾವಣೆಯ ಟಿಕೆಟ್​ ಸಹ ಕೈತಪ್ಪಿದೆ.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ನಿಗದಿಯಾಗಿದ್ದು, ಬಿಜೆಪಿ ಗೆದ್ದಿದ್ದ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಬಿಜೆಪಿ ಪಾಲಿಗೆ ಸಿಕ್ಕಿದ್ದು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಹಾಗಾಗಿ ಈ ಬಾರಿ ಗೆಲ್ಲುವ ಸಾಧ್ಯತೆ ಬಿಜೆಪಿಗೇ ಹೆಚ್ಚಾಗಿದೆ. ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿತ್ತು.

.

.



Related posts

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ, ಅಪರೂಪದ ಸಾಧಕ ಹೊಸಬೆಟ್ಟು ಕೆ. ಆರ್. ಪುತ್ರನ್ ನಿಧನ

Mumbai News Desk