30 C
Mumbai
April 24, 2026
Mumbai News Kannada
ಸುದ್ದಿ

ಮುಂಬೈ: ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವು





ಮುಂಬೈನ ಚೆಂಬೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮುಂಜಾನೆ ಚೆಂಬೂರ್ ಪೂರ್ವ ಸಿದ್ಧಾರ್ಥ್ ಕಾಲೋನಿಯಲ್ಲಿರುವ ಅಂಗಡಿಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇಡೀ ಅಂಗಡಿಗೆ ಬೆಂಕಿ ಆವರಿಸಿದ್ದು, ಅದರ ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಐವರು ಸುಟ್ಟು ಕರಕಲಾಗಿದ್ದಾರೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಒಳಗೆ ಸಿಲುಕಿದ್ದವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗ್ರೌಂಡ್ ಪ್ಲಸ್ ಒನ್ (ಜಿ+1) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ, ಬೆಂಕಿ ಮೀಟರ್ ಬಾಕ್ಸ್‌ಗೆ ತಗುಲಿತು ಮತ್ತು ಶೀಘ್ರದಲ್ಲೇ ಕಟ್ಟಡದ ಇತರ ಭಾಗಗಳಿಗೆ ಹರಡಿತು. ನೆಲ ಮಹಡಿಯಲ್ಲಿ ಅಂಗಡಿಯಿದ್ದು, ಮೇಲಿನ ಮಹಡಿಯಲ್ಲಿ ಕುಟುಂಬ ವಾಸವಾಗಿತ್ತು.



Related posts

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk