September 6, 2026
Mumbai News Kannada
ಮುಂಬಯಿ

ಸಾಯಿನಾಥ ಮಿತ್ರ ಮಂಡಳಿಯಿಂದ ಹೊರೆ ಕಾಣಿಕೆ ಮೆರವಣಿಗೆ





ಚಿತ್ರ ವರದಿ : ಧನಂಜಯ ಪೂಜಾರಿ

ಮುಂಬಯಿಯ ಉಪನಗರ ಡೊಂಬಿವಲಿಯ ವಜ್ರ ಮಹೋತ್ಸವವನ್ನು ಆಚರಿಸುತ್ತಿರುವ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿಯ ನವರಾತ್ರಿ ಉತ್ಸವದಲ್ಲಿ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ನಡೆಯುತ್ತಿದ್ದು ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆ ನಿಮಿತ್ತ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳು ಮಂಡಳಿಗೆ ಹೊರೆ ಕಾಣಿಕೆ ಸಮರ್ಪಿಸುತಿವೆ. ಅದರಲ್ಲಿ ಮುಖ್ಯವಾಗಿ ಶ್ರೀ ಸಾಯಿನಾಥ ಮಿತ್ರ ಮಂಡಳಿ, ಅಕ್ಟೋಬರ್ 6 ರ ರವಿವಾರ ಶ್ರೀ ಸಾಯಿನಾಥ ಮಿತ್ರ ಮಂಡಳಿ ಇವರಿಂದ ಹೊರೆ ಕಾಣಿಕೆ ಮೆರವಣಿಗೆ ಮೂಲಕ ನಡೆಯಿತು. ಜುನ ಡೊಂಬಿವಲಿಯ ಗಿರಿಜಾಮಾತ ಮಂದಿರದಿಂದ ಪ್ರಾರಂಭವಾದ ಮೆರವಣಿಗೆ ಬ್ಯಾಂಡ್ ವಾಲಗದ ಮೂಲಕ ಪಶ್ಚಿಮ ವಿಭಾಗ ಪೂಜಾ ಸ್ಥಳಕ್ಕೆ ತಲುಪಿತು. ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ, ಅಧ್ಯಕ್ಷರಾದ ಗೋಪಾಲ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಲಾಸಿನಿ ಶೆಟ್ಟಿ ಹಾಗೋ ಪದಾಧಿಕಾರಿಗಳು ಮೆರವಣಿಗೆಯನ್ನು ಆದರಪೂರ್ವಕವಾಗಿ ಸ್ವಾಗತಿಸಿದರು.

ಸಾಯಿನಾಥ ಮಿತ್ರ ಮಂಡಳಿ ಅಧ್ಯಕ್ಷ ಮೋಹನ್ ಸಾಲ್ಯಾನ್, ಕಾರ್ಯದರ್ಶಿ ಸುರೇಶ್ ಮೊಗವೀರ, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಮಲಾಡ್ ಪೂರ್ವ ದ  ಲಕ್ಷ್ಮಣ್ ನಗರದ ಶ್ರೀ ಶನೀಶ್ವರ ಮಹೋತಭಾರ  ದೇವಸ್ಥಾನದ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗು ಶಿಕ್ಷಣದ ನೆರವು.

Mumbai News Desk

ಭಾಯಂದ‌ರ್  ಶ್ರೀ ಹನುಮಾನ್ ಭಜನಾ ಮಂಡಳಿ ವತಿಯಿಂದ ಸುಧಾಕರ್  ಶೆಟ್ಟಿ ಬಿಯಾಳಿ ಮಂದಾರ್ತಿಯವರ ಮುಂದಾಳತ್ವದಲ್ಲಿ  ಯಕ್ಷಗಾನ ‘ನಾಗಶ್ರೀ’ 

Mumbai News Desk

ವಸಾಯಿ ತಾಲೂಕು ಮೊಗವೀರ ಸಂಘ (ರಿ.) ವತಿಯಿಂದ ಸಮುದಾಯ ಪಿಕ್ನಿಕ್ ಯಶಸ್ವಿಯಾಗಿ ಆಯೋಜನೆ

Mumbai News Desk

ಮುಂಬೈನಲ್ಲಿ 426 ಫ್ಲಾಟ್‌ಗಳು ಲಭ್ಯ : ಬೆಲೆಗಳು ಕೈಗೆಟುಕದ ಕಾರಣ, ಸ್ವಂತ ಮನೆ ಹೊಂದುವವರಿಗೆ ಗ್ರಹ ಖರೀದಿ ಒಂದು ಮರೀಚಿಕೆಯೇ?

Mumbai News Desk

ಸ್ಮಿತಾ ಬೆಳ್ಳೂರ್ ಯವರು  ಸಂಗೀತ  ಕಛೇರಿ ಮೂಲಕ ಸಂಗೀತಕಲಾ ರಸಿಕರನ್ನು ಮನಮೋಹಕಗೊಳಿಸಿದರು

Mumbai News Desk

ಕರ್ನಾಟಕ ಸಂಘ ಕಲ್ಯಾಣ:ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಹಾಗೂ 22ನೇಯ ವಾರ್ಷಿಕೋತ್ಸವ

Mumbai News Desk