30.9 C
Mumbai
June 8, 2026
Mumbai News Kannada
ಸುದ್ದಿ

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ





ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ
ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್‌ಲೈನ್ ಬುಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ಅವಕಾಶ ಕಲ್ಪಿಸುವ ಸೌಲಭ್ಯ ಕಲ್ಪಿಸಲಾಗುವುದು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಇರುವುದಿಲ್ಲ. ಯಾತ್ರಿಗಳು ಬುಕ್ ಮಾಡದೆ ಬಂದರೆ ನಾವು ಪರಿಶೀಲಿಸುತ್ತೇವೆ.

ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ವಂ ಸಚಿವ ವಿಎನ್ ವಾಸವನ್ ಹೇಳಿದ್ದಾರೆ. ಯಾತ್ರಿಕರಿಗೆ ಬುಕಿಂಗ್ ಸಮಯದಲ್ಲಿ ಪ್ರಯಾಣದ ಮಾರ್ಗವನ್ನು ಆಯ್ಕೆ ಮಾಡುವ ಅವಕಾಶವನ್ನು ಒದಗಿಸಲಾಗುತ್ತದೆ. ಹೀಗಾಗಿ, ಯಾತ್ರಿಕರು ಕಡಿಮೆ ದಟ್ಟಣೆ ಇರುವ ಮಾರ್ಗವನ್ನು ಆಯ್ಕೆ ಮಾಡಬಹುದು.

ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು ಗುರುತಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು.

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

ಶಬರಿಮಲೆಗೆ ಹೋಗುವ ರಸ್ತೆಗಳು ಮತ್ತು ಪಾರ್ಕಿಂಗ್ ಮೈದಾನಗಳ ದುರಸ್ತಿ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಶಬರಿ ಅತಿಥಿ ಗೃಹ ನಿರ್ವಹಣೆ ಅಕ್ಟೋಬರ್ 31ಕ್ಕೆ ಪೂರ್ಣಗೊಳ್ಳಲಿದ್ದು, ಪ್ರಣವಂ ಅತಿಥಿ ಗೃಹದ ನವೀಕರಣ ಪೂರ್ಣಗೊಂಡಿದೆ.



Related posts

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk

ಕೊಂಕಣ ರೈಲು ಮಾರ್ಗ ದ್ವಿಗುಣಗೊಳಿಸುವಂತೆ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

Mumbai News Desk