32 C
Mumbai
March 7, 2026
Mumbai News Kannada
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ






ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.
ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನ ವಿಶ್ವಸ್ಥರಾಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಚೀನ ದೇವಾಲಯಗಳನ್ನು ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ, ಸರಕಾರದ ವರ್ಷದಲ್ಲಿರುವ ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ, ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತದಿಂದ ಮುಕ್ತಗೊಳಿಸಿಲ್ಲ. ಇತರ ಆರಾಧನಾ ಸ್ಥಳಗಳು ಅವರ ಹಿಡಿತದಲ್ಲಿವೆ, ದೇವಸ್ಥಾನಗಳು ಸರಕಾರದ ವಶದಲ್ಲಿ ಇರುವುದರಿಂದ ಶ್ರದ್ಧಾ ಕೇಂದ್ರಗಳಲ್ಲಿ ಅಪಚಾರವಾಗಲು ಅವಕಾಶವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.
ಇದೇ ಸಂದರ್ಭ ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರವಾಗದಂತ್ತೆ ನೋಡಿಕೊಳ್ಳುವುದು
ಸರಕಾರಗಳ ಕರ್ತವ್ಯ. ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾದರೆ ಇಂಥ ಘಟನೆಗಳಿಗೆ ಕಡಿವಾಣ ಹಾಕಬಹುದು ಎಂದು ಸ್ವಾಮೀಜಿ ತಿಳಿಸಿದರು.



Related posts

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk