30.9 C
Mumbai
June 8, 2026
Mumbai News Kannada
ಸುದ್ದಿ

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ






ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಹಿಂದೂ ದೇವಾಲಯಗಳು ಸರಕಾರದ ವಶದಲ್ಲಿದೆ.
ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಎಲ್ಲಾ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನ ವಿಶ್ವಸ್ಥರಾಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಾಚೀನ ದೇವಾಲಯಗಳನ್ನು ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ, ಸರಕಾರದ ವರ್ಷದಲ್ಲಿರುವ ದೇವಾಲಯಗಳನ್ನು ಹಿಂದುಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ, ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತದಿಂದ ಮುಕ್ತಗೊಳಿಸಿಲ್ಲ. ಇತರ ಆರಾಧನಾ ಸ್ಥಳಗಳು ಅವರ ಹಿಡಿತದಲ್ಲಿವೆ, ದೇವಸ್ಥಾನಗಳು ಸರಕಾರದ ವಶದಲ್ಲಿ ಇರುವುದರಿಂದ ಶ್ರದ್ಧಾ ಕೇಂದ್ರಗಳಲ್ಲಿ ಅಪಚಾರವಾಗಲು ಅವಕಾಶವಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.
ಇದೇ ಸಂದರ್ಭ ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರವಾಗದಂತ್ತೆ ನೋಡಿಕೊಳ್ಳುವುದು
ಸರಕಾರಗಳ ಕರ್ತವ್ಯ. ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾದರೆ ಇಂಥ ಘಟನೆಗಳಿಗೆ ಕಡಿವಾಣ ಹಾಕಬಹುದು ಎಂದು ಸ್ವಾಮೀಜಿ ತಿಳಿಸಿದರು.



Related posts

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

SSLC ಪರೀಕ್ಷೆ : 90% ಅಂಕ ಪಡೆದ ನವ್ಯ ಎನ್ ಸುವರ್ಣ

Mumbai News Desk

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ಪ್ರೇಕ್ಷಕರನ್ನು ಮನರಂಜಿಸಿದ ‌ಕೊಂಕಣಿ ಹಾಸ್ಯ  ನಾಟಕ ‘ ಲಗ್ನಾ ಪಿಶ್ಶ್ಯೆ ‘

Mumbai News Desk