32 C
Mumbai
March 7, 2026
Mumbai News Kannada
ಮುಂಬಯಿ

ಪಶ್ಚಿಮ ವಿಭಾಗ ಸಾರ್ವಜನಿಕ ನವರತ್ರೋತ್ಸವ ಮಂಡಳಿಯ ವಜ್ರ ಮಹೋತ್ಸವ ಸಂಭ್ರಮದ ನಾಲ್ಕನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ





ಶ್ರೀ ದುರ್ಗೆಯ ಕೃಪೆ ನಮ್ಮೆಲ್ಲರ ಮೇಲಿರಲಿ – ಚಂದ್ರಹಾಸ ರೈ

ರವಿ.ಬಿ‌.ಅಂಚನ್ ಪಡುಬಿದ್ರಿ

ಡೊಂಬಿವಲಿ ಅ. 6: ಕಳೆದ 60 ವರ್ಷಗಳ ಹಿಂದೆ ತುಳು- ಕನ್ನಡಿಗರು ಸಂಘಟಿತರಾಗಿ ಧಾರ್ಮಿಕ ಕಾರ್ಯಗಳನ್ನು ಮಾಡ ಬೇಕೆನ್ನುವ ಉದ್ಧೇಶದಿಂದ ಗ್ರಾಮೀಣ ಪ್ರದೇಶವಾದ ಡೊಂಬಿವಲಿಯಲ್ಲಿ ನವರಾತ್ರೋತ್ಸವ ಮಂಡಳಿಯನ್ನು ಸ್ಥಾಪಿಸಿದ ದಾಸು ಬಾಬು ಶೆಟ್ಟಿ ಅಭಿನಂದನೆಗೆ ಅರ್ಹರು ದಾಸು ಶೆಟ್ಟಿಯವರ ದೂರದೃಷ್ಟಿಯಿಂದ ತುಳು- ಕನ್ನಡಿಗರ ಧಾರ್ಮಿಕ ಸೇವಾ ಭಾವನೆಯಿಂದ ಇಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ವಜ್ರ ಮಹೋತ್ಸವವನ್ನು ಅಚರಿಸುತ್ತಿದೆ. ಶ್ರೀ ದುರ್ಗೆಯಲ್ಲಿ ನಮ್ಮ ಕಷ್ಟ ಗಳನ್ನು ಪ್ರಾರ್ಥಿಸಿ ಬೇಡಿಕೊಂಡಾಗ ದುರ್ಗೆಯು ಕಷ್ಟವನ್ನು ಪರಿಹರಿಸುತ್ತಾಳೆ ಅದುದರಿಂದ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಮುಂಬಯಿ ಮಹಾನಗರದಾಂತ್ಯ ಪ್ರಸಿದ್ಧಿಯನ್ನು ಪಡೆದಿದೆ.ರಸ್ತೆಯ ಇಕ್ಕಟ್ಟಿನ ಈ ಜಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತಿದೆ ಇದು ಶ್ರೀ ದುರ್ಗೆಯ ಅನುಗ್ರಹದಿಂದ ಮಾತ್ರ ಸಾಧ್ಯ  ಶ್ರೀ ದುರ್ಗೆಯ ಕೃಪೆ ನಮ್ಮೆಲ್ಲರ ಮೇಲಿರಲಿ ಎಂದು ಕಾರ್ಯಕ್ರಮದ ಪ್ರಯೋಜಕರಾದ ಚಂದ್ರಹಾಸ ರೈ ನುಡಿದರು
ಅವರು ಅಕ್ಟೋಬರ್6 ರ ರವಿವಾರ ಸಂಜೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವಜ್ರ ಮಹೋತ್ಸವ ನಿಮಿತ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಹ ಪ್ರಾಯೋಜಕರಾಗಿ ಮಾತನಾಡುತ್ತಿದ್ದರು.
ಧರ್ಮದರ್ಶಿ ಅಶೋಕ್ ಶೆಟ್ಟಿ ಮಾತನಾಡುತ್ತಾ ಕಳೆದ ನಾಲ್ಕು ದಿನದಿಂದ ನವರಾತ್ರಿ ವಜ್ರ ಮಹೋತ್ಸವ ಅಚರಣೆಯ ಸಾಂಸ್ಕೃತಿಕ ಕಾರ್ಯಕ್ರವು ಉತ್ತಮ ರೀತಿಯಲ್ಲಿ ಜರಗುತ್ತಿದ್ದು  ಕಾರ್ಯಕ್ರಮದ ಪ್ರಾಯೋಜಕರಿಗೆ, ಪ್ರೋತ್ಸಾಹಕರಿಗೆ ಮನದಾಳದ ವಂದನೆಗಳು ನಿಮ್ಮೇಲ್ಲರ ಸಹಕಾರ ಮುಂದೆಯೂ ಮಂಡಳಿಗೆ ಸದಾ ಇರಲಿ ಎಂದರು
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಚಂದ್ರಹಾಸ್ ರೈ ದಂಪತಿಗಳನ್ನು  ನತ್ತು  ಸತೀಶ್ ಕೋಟ್ಯಾನ್ ದಂಪತಿಗಳನ್ನು ವೇದಿಕೆಯ ಮೇಲೆ ವಿಶೇಷವಾಗಿ ಸನ್ಮಾನಿಸಲಾಯಿತು.


ಆತ್ಮೀಕ ರೈ ಯವರ ಪ್ರಾರ್ಥನೆಯೊಂದಿಗೆ ವೇದಿಕೆಯ ಮೇಲಿದ್ದ ಗಣ್ಯರು ದೀಪ ಪ್ರಜ್ವಲಿಸಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಅಶೋಕ್ ದಾಸು ಶೆಟ್ಟಿ, ಗೋಪಾಲ ಕೆ. ಶೆಟ್ಟಿ, ಚಂದ್ರಹಾಸ್ ರೈ ದಂಪತಿ, ಮಮತಾ ಡೆಂಟಲ್ ಲ್ಯಾಬ್ ಸತೀಶ್ ಕೋಟ್ಯಾನ್ ದಂಪತಿ, ವಿಲಾಸಿನಿ ಶೆಟ್ಟಿ
ನವೀನ್ ಮತ್ತು ಮಿಹಿರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸ್ಥಳೀಯ ಹಾಗೂ ಇನ್ನಿತರ ಮರಾಠಿ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.



Related posts

 ಅಂದೇರಿ ಮೊಗವೀರ ಭವನದಲ್ಲಿ ಯಕ್ಷ ಅಭಿಮಾನಿಗಳನ್ನು ರಂಜಿಸಿದ ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ,

Mumbai News Desk

ಗೋವಂಡಿ ಬೈಂಗನ್‌ವಾಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರದ 46 ನೇ ವಾರ್ಷಿಕೋತ್ಸವ

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.

Mumbai News Desk

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ: ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಂಡಿದ್ದ ನ್ಯೂ ಪನ್ವೇಲ್‌ನ ಮಾಜಿ ಕಾರ್ಪೊರೇಟರ್ ಸಂತೋಷ್ ಜಿ ಶೆಟ್ಟಿ

Mumbai News Desk

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಜಗಜ್ಯೋತಿ ಕಲಾ ವೃಂದ, ಡೊಂಬಿವಲಿ: 39ನೇ ವಾರ್ಷಿಕ ಮಹಾಸಭೆ

Mumbai News Desk